September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.8 ರಂದು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದ ವಿಶೇಷತೆ: ಕಂಪ್ಯೂಟರೀಕೃತ ಕಣ್ಣಿನ ಉಚಿತ ತಪಾಸಣೆ ನಡೆಸಲಾಗುವುದು. 5ರಿಂದ 15 ವಯಸ್ಸಿನವರೆಗೆ ಕಣ್ಣಿನ ತೊಂದರೆ ಇರುವ ಮಕ್ಕಳಿಗೆ ಶಿಬಿರದ ಪ್ರಯುಕ್ತ ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುವುದು. ಶಿಬಿರದಲ್ಲಿ ಸಮೀಪ ದೃಷ್ಟಿ (Near Vision) ತೊಂದರೆಯವರಿಗೆ ಉಚಿತ ಕನ್ನಡಕವನ್ನು ವಿತರಿಸಲಾಗುವುದು. 15 ವಯಸ್ಸಿಗಿಂತ ಮೇಲ್ಪಟ್ಟು ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ಅಗತ್ಯವುಳ್ಳವರಿಗೆ ಕನ್ನಡಕವನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುವುದು. ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಗುವುದು. ಶಿಬಿರದಲ್ಲಿ ನೇತ್ರದಾನದ ಬಗ್ಗೆ ಮಾಹಿತಿ ನೀಡಲಾಗುವುದು.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕ , ಯುವ ವಿಜ್ಞಾನಿ ದೀಪಕ್ ಸಂಶೋಧನಾ ಪಯಣದ ಕೆಲಸಕ್ಕೆ ಸುಧಾ ಮೂರ್ತಿರವರಿಂದ ಶ್ಲಾಘನೆ

Suddi Udaya
error: Content is protected !!