30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

ಶಿಬಾಜೆ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ ರವರು ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಿಬಾಜೆ ಗ್ರಾ. ಪಂಚಾಯತ್ ಅಧ್ಯಕ್ಷೆ ರತ್ನ, ಉಪಾಧ್ಯಕ್ಷ ದಿನಕರ್ ಕುರುಪ್, ನಿಕಟಪೂರ್ವ ಉಪಾಧ್ಯಕ್ಷ ವಿನಯ ಚಂದ್ರ ಟಿ., ಮಾಜಿ ಉಪಾಧ್ಯಕ್ಷ ಪರಮೇಶ್ವರ ಪೂಜಾರಿ, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಮಹೇಶ್ ಶೆಟ್ಟಿಗಾರ್, ರಮೇಶ್ ಕುರುಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಜಯರಾಮ್ ಶಿಬಾಜೆ ಸ್ವಾಗತಿಸಿ, ಧನ್ಯವಾದವಿತ್ತರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya
error: Content is protected !!