September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

ಶಿಬಾಜೆ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ ರವರು ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಿಬಾಜೆ ಗ್ರಾ. ಪಂಚಾಯತ್ ಅಧ್ಯಕ್ಷೆ ರತ್ನ, ಉಪಾಧ್ಯಕ್ಷ ದಿನಕರ್ ಕುರುಪ್, ನಿಕಟಪೂರ್ವ ಉಪಾಧ್ಯಕ್ಷ ವಿನಯ ಚಂದ್ರ ಟಿ., ಮಾಜಿ ಉಪಾಧ್ಯಕ್ಷ ಪರಮೇಶ್ವರ ಪೂಜಾರಿ, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಮಹೇಶ್ ಶೆಟ್ಟಿಗಾರ್, ರಮೇಶ್ ಕುರುಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಜಯರಾಮ್ ಶಿಬಾಜೆ ಸ್ವಾಗತಿಸಿ, ಧನ್ಯವಾದವಿತ್ತರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya

ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಕನ್ಯಾಡಿಯ ವಿಶ್ವನಾಥ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya
error: Content is protected !!