March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಮಂಗಳೂರು ಗಣಿ ಇಲಾಖೆ ತಂಡ ದಾಳಿ ನಡೆಸಿದ್ದಾರೆ.

ದ.ಕ. ಜಿಲ್ಲಾ ಗಣಿ ಇಲಾಖೆಯ ಗಿರೀಶ್ ಮೋಹನ್ ನೇತೃತ್ವದ ತಂಡ ನ.6 ರಂದು ದಾಳಿ ನಡೆಸಿದ ವೇಳೆ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸಲಾಗುತ್ತಿದ್ದ ಸುಮಾರು 6 ಲಕ್ಷ ಮೌಲ್ಯದ ನಾಲ್ಕು ಬೋಟುಗಳನ್ನು ವಶಕ್ಕೆ ಪಡೆದಿದ್ದು ಸ್ಥಳದಲ್ಲಿ ಸಂಗ್ರಹಿಸಿದ್ದ ಮರಳಿನ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.ದ.ಕ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಗಿರೀಶ್ ಮೋಹನ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ , ಧರ್ಮಸ್ಥಳ ಗ್ರಾಮ ಆಡಳಿತಧಾರಿ ಪ್ರದೀಪ್ ಕುಮಾರ್ , ಗ್ರಾಮ ಸಹಾಯ ಹರೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya
error: Content is protected !!