July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

ನಾಲ್ಕೂರು: ಸನಾತನ ಹಿಂದೂ ಧರ್ಮದ ಸಂಸ್ಕೃತಿ ,ಆಚಾರ ವಿಚಾರ ಅತ್ಯಂತ ಶ್ರೀಮಂತವಾದುದು.ಭಜನಾ ತಂಡಗಳ ರಚನೆಯಿಂದ ಪರಿಸರದಲ್ಲಿ ಸಾತ್ವಿಕ ಭಾವ ಮೂಡುವುದರೊಂದಿಗೆ ಸಮಾಜ ಗಟ್ಟಿಗೊಳ್ಳುತ್ತದೆ ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹೇಳಿದರು.

ಅವರು ಅ.27 ರಂದು ನಾಲ್ಕೂರು ಗ್ರಾಮದ ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಕ್ಕಳ ಕುಣಿತಾ ಭಜನಾ ತಂಡದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ರಮನಾಥ ಶೆಟ್ಟಿ ಪಂಬಾಜೆ ಉದ್ಘಾಟಿಸಿ ಮಾತನಾಡಿ ಭಜನೆಯಿಂದ ವಿಭಜನೆಯಾಗದು. ಶ್ರದ್ದೆ ಭಕ್ತಿ ಭಾವದ ಭಜನೆಯಿಂದ ದೆರವರ ಅನುಗ್ರಹ ಪಡೆಯಬಹುದು ಎಂದರು.

ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು,ಯಕ್ಷ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ, ಪಂಚಶ್ರೀ ಮಹಿಳಾ ಭಜನಾ ಮಂಡಳಿ‌ ಅಧ್ಯಕ್ಷೆ ಪುಷ್ಪಾ ಗೀರೀಶ್,ಪ್ರಮೋದ್ ಪೂಜಾರಿ ಸೂಳಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ರಾಜ್ಯಮಟ್ಟದ ಭಜನಾ ತರಬೇತುದಾರ ಸಂದೇಶ್ ಮದ್ದಡ್ಕ ಭಜನೆಯ ಕುರಿತು ಮಾಹಿತಿ ನೀಡಿದರು. ಪ್ರಮುಖರಾದ ಸುನೀಲ್ ಶೆಟ್ಟಿ ವಿಲ್ಲು,ಶರತ್ ಅಂಚನ್, ನಂದೇಶ್ ಶೆಟ್ಟಿ, ಸೀತರಾಮ ಪೂಜಾರಿ,ಗೀರೀಶ್ ಬಂಗೇರ ನಿಟ್ಟಡ್ಕ ಹರೀಶ್ ನಂದ್ರಟ್ಟ ಮೊದಲಾದವರು ಉಪಸ್ಥಿತರಿದ್ದರು.

ಸೇವಾ ಪ್ರತಿನಿಥಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಸೇವಕ ಅಶೋಕ್ ತೋಟದಪಲ್ಕೆ ಸ್ವಾಗತಿಸಿ, ವಂದಿಸಿದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!