23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

ನಾಲ್ಕೂರು: ಸನಾತನ ಹಿಂದೂ ಧರ್ಮದ ಸಂಸ್ಕೃತಿ ,ಆಚಾರ ವಿಚಾರ ಅತ್ಯಂತ ಶ್ರೀಮಂತವಾದುದು.ಭಜನಾ ತಂಡಗಳ ರಚನೆಯಿಂದ ಪರಿಸರದಲ್ಲಿ ಸಾತ್ವಿಕ ಭಾವ ಮೂಡುವುದರೊಂದಿಗೆ ಸಮಾಜ ಗಟ್ಟಿಗೊಳ್ಳುತ್ತದೆ ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹೇಳಿದರು.

ಅವರು ಅ.27 ರಂದು ನಾಲ್ಕೂರು ಗ್ರಾಮದ ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಕ್ಕಳ ಕುಣಿತಾ ಭಜನಾ ತಂಡದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ರಮನಾಥ ಶೆಟ್ಟಿ ಪಂಬಾಜೆ ಉದ್ಘಾಟಿಸಿ ಮಾತನಾಡಿ ಭಜನೆಯಿಂದ ವಿಭಜನೆಯಾಗದು. ಶ್ರದ್ದೆ ಭಕ್ತಿ ಭಾವದ ಭಜನೆಯಿಂದ ದೆರವರ ಅನುಗ್ರಹ ಪಡೆಯಬಹುದು ಎಂದರು.

ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು,ಯಕ್ಷ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ, ಪಂಚಶ್ರೀ ಮಹಿಳಾ ಭಜನಾ ಮಂಡಳಿ‌ ಅಧ್ಯಕ್ಷೆ ಪುಷ್ಪಾ ಗೀರೀಶ್,ಪ್ರಮೋದ್ ಪೂಜಾರಿ ಸೂಳಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ರಾಜ್ಯಮಟ್ಟದ ಭಜನಾ ತರಬೇತುದಾರ ಸಂದೇಶ್ ಮದ್ದಡ್ಕ ಭಜನೆಯ ಕುರಿತು ಮಾಹಿತಿ ನೀಡಿದರು. ಪ್ರಮುಖರಾದ ಸುನೀಲ್ ಶೆಟ್ಟಿ ವಿಲ್ಲು,ಶರತ್ ಅಂಚನ್, ನಂದೇಶ್ ಶೆಟ್ಟಿ, ಸೀತರಾಮ ಪೂಜಾರಿ,ಗೀರೀಶ್ ಬಂಗೇರ ನಿಟ್ಟಡ್ಕ ಹರೀಶ್ ನಂದ್ರಟ್ಟ ಮೊದಲಾದವರು ಉಪಸ್ಥಿತರಿದ್ದರು.

ಸೇವಾ ಪ್ರತಿನಿಥಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಸೇವಕ ಅಶೋಕ್ ತೋಟದಪಲ್ಕೆ ಸ್ವಾಗತಿಸಿ, ವಂದಿಸಿದರು.

Related posts

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!