September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

ನಾಲ್ಕೂರು: ಸನಾತನ ಹಿಂದೂ ಧರ್ಮದ ಸಂಸ್ಕೃತಿ ,ಆಚಾರ ವಿಚಾರ ಅತ್ಯಂತ ಶ್ರೀಮಂತವಾದುದು.ಭಜನಾ ತಂಡಗಳ ರಚನೆಯಿಂದ ಪರಿಸರದಲ್ಲಿ ಸಾತ್ವಿಕ ಭಾವ ಮೂಡುವುದರೊಂದಿಗೆ ಸಮಾಜ ಗಟ್ಟಿಗೊಳ್ಳುತ್ತದೆ ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹೇಳಿದರು.

ಅವರು ಅ.27 ರಂದು ನಾಲ್ಕೂರು ಗ್ರಾಮದ ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಕ್ಕಳ ಕುಣಿತಾ ಭಜನಾ ತಂಡದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ರಮನಾಥ ಶೆಟ್ಟಿ ಪಂಬಾಜೆ ಉದ್ಘಾಟಿಸಿ ಮಾತನಾಡಿ ಭಜನೆಯಿಂದ ವಿಭಜನೆಯಾಗದು. ಶ್ರದ್ದೆ ಭಕ್ತಿ ಭಾವದ ಭಜನೆಯಿಂದ ದೆರವರ ಅನುಗ್ರಹ ಪಡೆಯಬಹುದು ಎಂದರು.

ವೇದಿಕೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಪಿ ಅಳಿಯೂರು,ಯಕ್ಷ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ, ಪಂಚಶ್ರೀ ಮಹಿಳಾ ಭಜನಾ ಮಂಡಳಿ‌ ಅಧ್ಯಕ್ಷೆ ಪುಷ್ಪಾ ಗೀರೀಶ್,ಪ್ರಮೋದ್ ಪೂಜಾರಿ ಸೂಳಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ರಾಜ್ಯಮಟ್ಟದ ಭಜನಾ ತರಬೇತುದಾರ ಸಂದೇಶ್ ಮದ್ದಡ್ಕ ಭಜನೆಯ ಕುರಿತು ಮಾಹಿತಿ ನೀಡಿದರು. ಪ್ರಮುಖರಾದ ಸುನೀಲ್ ಶೆಟ್ಟಿ ವಿಲ್ಲು,ಶರತ್ ಅಂಚನ್, ನಂದೇಶ್ ಶೆಟ್ಟಿ, ಸೀತರಾಮ ಪೂಜಾರಿ,ಗೀರೀಶ್ ಬಂಗೇರ ನಿಟ್ಟಡ್ಕ ಹರೀಶ್ ನಂದ್ರಟ್ಟ ಮೊದಲಾದವರು ಉಪಸ್ಥಿತರಿದ್ದರು.

ಸೇವಾ ಪ್ರತಿನಿಥಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಸೇವಕ ಅಶೋಕ್ ತೋಟದಪಲ್ಕೆ ಸ್ವಾಗತಿಸಿ, ವಂದಿಸಿದರು.

Related posts

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya
error: Content is protected !!