September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆಯು ವಕೀಲರ ಭವನದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ನ್ಯಾಯಾಧೀಶರಾದ ಮನು ಬಿ ಕೆ ದೀಪಾವಳಿಯ ಬಗ್ಗೆ ಪ್ರಾಸ್ತವಿಕ ಮಾತುಗಳನ್ನಾಡಿದರು. ದೀಪಾವಳಿ ಹಬ್ಬದ ಮಹತ್ವದ ಬಗ್ಗೆ ಬೆಳ್ತಂಗಡಿ ವಕೀಲರ ಸಂಘದ ಸದಸ್ಯ ನ್ಯಾಯವಾದಿ ಶ್ರೀಕೃಷ್ಣ ಶೆಣೈ ಬಹಳ ಅರ್ಥವತ್ತಾಗಿ ವಿವರಿಸಿದರು.


ಅಧ್ಯಕ್ಷೀಯ ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿದರು.
ವೇದಿಕೆಯಲ್ಲಿ ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಹಾಗೂ ಕೋಶಾಧಿಕಾರಿ ಪ್ರಶಾಂತ್ ಎಂ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವೈವಾಹಿಕ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಬಿ ಕೆ ಧನಂಜಯ ರಾವ್ ಹಾಗೂ ಶ್ರೀಮತಿ ರಾಜರ್ಷಿ ದಂಪತಿಗಳನ್ನು ಗೌರವಿಸಲಾಯಿತು.
ಹಿರಿಯ ವಕೀಲರಾದ ಬಿ ಕೆ ಧನಂಜಯ ರಾವ್ ಎಲ್ಲರಿಗೂ ಉಪಹಾರದ ವ್ಯವಸ್ಥೆಯನ್ನು ಏರ್ಪಡಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಪ್ರತೀಕ್ಷಾ ಹಾಗೂ ಸಮೂಹ ಗಾಯನವನ್ನು ಅಕ್ಷಯ್ ಕುಮಾರ್ ಮತ್ತು ಉಷಾ ಎನ್ ಜೀ ತಂಡದವರು ನೆರವೇರಿಸಿದರು. ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಸ್ವಾಗತಿಸಿದರು. ವಕೀಲರಾದ ಹರ್ಷಿತ್ ಕುಮಾರ್ ಹಾಗೂ ಸಂಧ್ಯಾ ರವರು ನಿರೂಪಿಸಿದರು. ಡಿ ಧನಂಜಯ ಕುಮಾರ್ ಧನ್ಯವಾದವಿತ್ತರು.

Related posts

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!