July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಮೇರಿ ಮಾತಾ ರಿಜಿಯನ್‌ನ ನಾಲ್ವರು ಭಗೀನಿಯರ ವೃತ ಸ್ವೀಕಾರದ ಸುವರ್ಣ ಸಂಭ್ರಮ ಮತ್ತು ರಜತ ಸಂಭ್ರಮವನ್ನು ನೆಲ್ಯಾಡಿಯಲ್ಲಿ ಆಚರಿಸಲಾಯಿತು. “ಆದ್ಯಾತ್ಮ ಮತ್ತು ಸೇವೆಯ ಮೂಲಕ ಭಗೀನಿಯರು ಪ್ರಭು ಯೇಸುಕ್ರಿಸ್ತನ ಜೀವನ ಮತ್ತು ಅವರ ಬದುಕಿನ ನೇರ ಪ್ರಾತ್ಯಕ್ಷತೆ ತಮ್ಮ ಬದುಕಿನಲ್ಲಿ ಒದಗಿಸುತ್ತಿದ್ದಾರೆ,” ಎಂದು ಇವರನ್ನು ಅಭಿನಂದಿಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿವಂದನೀಯ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಹೇಳಿದರು.

ಸಮಾರಂಭದಲ್ಲಿ ಸಿಸ್ಟರ್ ಫಿಲೋಮಿನ ಕುರಿಯನ್ ಮತ್ತು ಸಿಸ್ಟರ್ ಆನಿ ಕುರಿಯನ್ ಸುವರ್ಣ ಸಂಭ್ರಮವನ್ನು ಹಾಗೂ ಸಿಸ್ಟರ್ ಮೇಬಿಲ್ ಜೋನ್ ಮತ್ತು ಸಿಸ್ಟರ್ ಜಿನ್ಸಿ ರೋಸ್ ರಜತ ಮಹೋತ್ಸವವನ್ನು ಆಚರಿಸಿದರು. ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನೀಯ ಫಾ. ಶಾಜಿ ಮಾತ್ಯು ಹಾಗೂ ರಿಜಿನಲ್ ಸುಪೀರಿಯರ್ ಲಿಸ್ ಮಾತ್ಯು ಶುಭ ಕೋರಿದರು. ಹೆಗ್ಗಳದ ವಂದನೀಯ ಫಾ. ರೋಷನ್ ಪುದುಶೇರಿ ಮತ್ತು ಬಜಗೋಳಿಯ ಫಾ. ತೋಮಸ್ ಪಾರೆಕಾಟ್ಟಿಲ್ ಬಲಿಪೂಜೆಯಲ್ಲಿ ಭಾಗವಹಿಸಿದರು. ವಂದನೀಯ ಸಿಸ್ಟರ್ ಎಲ್ಸಿಲಿಟ್, ಸಿಸ್ಟರ್ ಬ್ಲೆಸಿಮರಿಯ, ಸಿಸ್ಟರ್ ಆಲ್ಫಿ, ಸಿಸ್ಟರ್ ತೆರೆಸ್ ಕುರಿಯನ್, ಸಿಸ್ಟರ್ ಆಲಿಸ್, ಸಿಸ್ಟರ್ ಸೌಮ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!