23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಮೇರಿ ಮಾತಾ ರಿಜಿಯನ್‌ನ ನಾಲ್ವರು ಭಗೀನಿಯರ ವೃತ ಸ್ವೀಕಾರದ ಸುವರ್ಣ ಸಂಭ್ರಮ ಮತ್ತು ರಜತ ಸಂಭ್ರಮವನ್ನು ನೆಲ್ಯಾಡಿಯಲ್ಲಿ ಆಚರಿಸಲಾಯಿತು. “ಆದ್ಯಾತ್ಮ ಮತ್ತು ಸೇವೆಯ ಮೂಲಕ ಭಗೀನಿಯರು ಪ್ರಭು ಯೇಸುಕ್ರಿಸ್ತನ ಜೀವನ ಮತ್ತು ಅವರ ಬದುಕಿನ ನೇರ ಪ್ರಾತ್ಯಕ್ಷತೆ ತಮ್ಮ ಬದುಕಿನಲ್ಲಿ ಒದಗಿಸುತ್ತಿದ್ದಾರೆ,” ಎಂದು ಇವರನ್ನು ಅಭಿನಂದಿಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿವಂದನೀಯ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಹೇಳಿದರು.

ಸಮಾರಂಭದಲ್ಲಿ ಸಿಸ್ಟರ್ ಫಿಲೋಮಿನ ಕುರಿಯನ್ ಮತ್ತು ಸಿಸ್ಟರ್ ಆನಿ ಕುರಿಯನ್ ಸುವರ್ಣ ಸಂಭ್ರಮವನ್ನು ಹಾಗೂ ಸಿಸ್ಟರ್ ಮೇಬಿಲ್ ಜೋನ್ ಮತ್ತು ಸಿಸ್ಟರ್ ಜಿನ್ಸಿ ರೋಸ್ ರಜತ ಮಹೋತ್ಸವವನ್ನು ಆಚರಿಸಿದರು. ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನೀಯ ಫಾ. ಶಾಜಿ ಮಾತ್ಯು ಹಾಗೂ ರಿಜಿನಲ್ ಸುಪೀರಿಯರ್ ಲಿಸ್ ಮಾತ್ಯು ಶುಭ ಕೋರಿದರು. ಹೆಗ್ಗಳದ ವಂದನೀಯ ಫಾ. ರೋಷನ್ ಪುದುಶೇರಿ ಮತ್ತು ಬಜಗೋಳಿಯ ಫಾ. ತೋಮಸ್ ಪಾರೆಕಾಟ್ಟಿಲ್ ಬಲಿಪೂಜೆಯಲ್ಲಿ ಭಾಗವಹಿಸಿದರು. ವಂದನೀಯ ಸಿಸ್ಟರ್ ಎಲ್ಸಿಲಿಟ್, ಸಿಸ್ಟರ್ ಬ್ಲೆಸಿಮರಿಯ, ಸಿಸ್ಟರ್ ಆಲ್ಫಿ, ಸಿಸ್ಟರ್ ತೆರೆಸ್ ಕುರಿಯನ್, ಸಿಸ್ಟರ್ ಆಲಿಸ್, ಸಿಸ್ಟರ್ ಸೌಮ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!