July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಕಳೆಂಜ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಕಳೆಂಜ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಕಳೆಂಜ ಗ್ರಾ. ಪಂಚಾಯತ್ ಉಪಾಧ್ಯಕ್ಷ ವಿಶ್ವನಾಥ ಗೌಡ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ನಿಡ್ಲೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧನಂಜಯ ಗೌಡ, ಮಲೆನಾಡು ಹಿತರಕ್ಷಣಾ ಜಿಲ್ಲಾ ಸಮಿತಿ ಸದಸ್ಯ ಸೋಯಿ ಪುದುವೆಟ್ಟು, ವಸಂತ ಕಳೆಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಪ್ರಸನ್ನ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು,. ಗ್ರಾ.ಪಂ. ಸದಸ್ಯ ಹರೀಶ್ ಕೊಯಿಲ ವಂದಿಸಿದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ. ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಎಮ್. ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!