23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.8 ರಂದು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದ ವಿಶೇಷತೆ: ಕಂಪ್ಯೂಟರೀಕೃತ ಕಣ್ಣಿನ ಉಚಿತ ತಪಾಸಣೆ ನಡೆಸಲಾಗುವುದು. 5ರಿಂದ 15 ವಯಸ್ಸಿನವರೆಗೆ ಕಣ್ಣಿನ ತೊಂದರೆ ಇರುವ ಮಕ್ಕಳಿಗೆ ಶಿಬಿರದ ಪ್ರಯುಕ್ತ ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುವುದು. ಶಿಬಿರದಲ್ಲಿ ಸಮೀಪ ದೃಷ್ಟಿ (Near Vision) ತೊಂದರೆಯವರಿಗೆ ಉಚಿತ ಕನ್ನಡಕವನ್ನು ವಿತರಿಸಲಾಗುವುದು. 15 ವಯಸ್ಸಿಗಿಂತ ಮೇಲ್ಪಟ್ಟು ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ಅಗತ್ಯವುಳ್ಳವರಿಗೆ ಕನ್ನಡಕವನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುವುದು. ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಗುವುದು. ಶಿಬಿರದಲ್ಲಿ ನೇತ್ರದಾನದ ಬಗ್ಗೆ ಮಾಹಿತಿ ನೀಡಲಾಗುವುದು.

Related posts

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!