25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

ಶಿಬಾಜೆ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ ರವರು ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಿಬಾಜೆ ಗ್ರಾ. ಪಂಚಾಯತ್ ಅಧ್ಯಕ್ಷೆ ರತ್ನ, ಉಪಾಧ್ಯಕ್ಷ ದಿನಕರ್ ಕುರುಪ್, ನಿಕಟಪೂರ್ವ ಉಪಾಧ್ಯಕ್ಷ ವಿನಯ ಚಂದ್ರ ಟಿ., ಮಾಜಿ ಉಪಾಧ್ಯಕ್ಷ ಪರಮೇಶ್ವರ ಪೂಜಾರಿ, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಮಹೇಶ್ ಶೆಟ್ಟಿಗಾರ್, ರಮೇಶ್ ಕುರುಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಜಯರಾಮ್ ಶಿಬಾಜೆ ಸ್ವಾಗತಿಸಿ, ಧನ್ಯವಾದವಿತ್ತರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya
error: Content is protected !!