September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

ಶಿಬಾಜೆ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ ರವರು ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಿಬಾಜೆ ಗ್ರಾ. ಪಂಚಾಯತ್ ಅಧ್ಯಕ್ಷೆ ರತ್ನ, ಉಪಾಧ್ಯಕ್ಷ ದಿನಕರ್ ಕುರುಪ್, ನಿಕಟಪೂರ್ವ ಉಪಾಧ್ಯಕ್ಷ ವಿನಯ ಚಂದ್ರ ಟಿ., ಮಾಜಿ ಉಪಾಧ್ಯಕ್ಷ ಪರಮೇಶ್ವರ ಪೂಜಾರಿ, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಮಹೇಶ್ ಶೆಟ್ಟಿಗಾರ್, ರಮೇಶ್ ಕುರುಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಜಯರಾಮ್ ಶಿಬಾಜೆ ಸ್ವಾಗತಿಸಿ, ಧನ್ಯವಾದವಿತ್ತರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

‘ರಾಜ್ಯ ಜ್ಯೂನಿಯರ್‌ ಅಥ್ಲೆಟಿಕ್ಸ್‌ ಗೆ’ ಸೇಕ್ರೆಡ್‌ ಹಾರ್ಟ್‌ ಕಾಲೇಜಿನ ವಿದ್ಯಾರ್ಥಿ ಪುನೀತ್‌ ಕುಮಾರ್‌ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!