25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಮಂಗಳೂರು ಗಣಿ ಇಲಾಖೆ ತಂಡ ದಾಳಿ ನಡೆಸಿದ್ದಾರೆ.

ದ.ಕ. ಜಿಲ್ಲಾ ಗಣಿ ಇಲಾಖೆಯ ಗಿರೀಶ್ ಮೋಹನ್ ನೇತೃತ್ವದ ತಂಡ ನ.6 ರಂದು ದಾಳಿ ನಡೆಸಿದ ವೇಳೆ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸಲಾಗುತ್ತಿದ್ದ ಸುಮಾರು 6 ಲಕ್ಷ ಮೌಲ್ಯದ ನಾಲ್ಕು ಬೋಟುಗಳನ್ನು ವಶಕ್ಕೆ ಪಡೆದಿದ್ದು ಸ್ಥಳದಲ್ಲಿ ಸಂಗ್ರಹಿಸಿದ್ದ ಮರಳಿನ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.ದ.ಕ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಗಿರೀಶ್ ಮೋಹನ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ , ಧರ್ಮಸ್ಥಳ ಗ್ರಾಮ ಆಡಳಿತಧಾರಿ ಪ್ರದೀಪ್ ಕುಮಾರ್ , ಗ್ರಾಮ ಸಹಾಯ ಹರೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya
error: Content is protected !!