22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಹಬ್ಬದ ಆಚರಣೆಯು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಮಾತನಾಡಿ ದೀಪಾವಳಿ ನಮ್ಮೆಲ್ಲರ ಬಾಳಿನಲ್ಲಿ ವರ್ಷವನ್ನು ತರಲಿ. ಕಷ್ಟ ನಷ್ಟಗಳು ದೂರವಾಗಿ ನೆಮ್ಮದಿ ನೆಲೆಸಲಿ ಎಂದರು.

ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ ಎಲ್ಲರನ್ನು ಸ್ವಾಗತಿಸಿ, ಸತ್ಕರಿಸಿದರು.

ಈ ಸಂದರ್ಭದಲ್ಲಿ ಬಳಂಜ ಬಿಲ್ಲವ ಸಂಘದ ನಿರ್ದೆಶಕ ರಂಜಿತ್ ಪೂಜಾರಿ,ಯುವ ಉದ್ಯಮಿ ಅಶ್ವಿನ್ ಬಿ.ಕೆ.,ಯುವಶಕ್ತಿ ಫ್ರೆಂಡ್ಸ್ ಕ್ಲಬ್ ಸದಸ್ಯರಾದ ಸಂಪತ್ ಪಿ ಕೋಟ್ಯಾನ್, ಪ್ರಣಾಮ್ ಶೆಟ್ಟಿ ನಾಲ್ಕೂರು,ಅಮೃತ ಎಸ್ ಕೋಟ್ಯಾನ್, ಕೆಸರು ಗದ್ದೆ ಕ್ರೀಡಾಕೂಟ ಸಂಚಾಲಕ ಸುರೇಶ್ ಪೂಜಾರಿ ಪಾಡಿ, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಅಧ್ಯಕ್ಷೆ ಜ್ಯೋತಿ, ತರಬೇತುದಾರರಾದ ಮಾನ್ಯ, ಮಂಡಳಿಯ ಸದಸ್ಯರ ಪೋಷಕರು,ಬಳಂಜ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.

ಹಣತೆ ಹಚ್ಚಿ,ಪಟಾಕಿ ಸಿಡಿಸಿ ಸಂಭ್ರಮ

ಕುಣಿತಾ ಭಜನಾ ಮಂಡಳಿ ಸದಸ್ಯರು ಸಂಘದ ಸುತ್ತ ಮುತ್ತ,ಬೊಳ್ಳಜ್ಜ ದೈವದ ಕಟ್ಟೆಯಲ್ಲೂ ದೀಪ ಹಚ್ಚಿದರು.ಹಣತೆ ದೀಪ ಹಚ್ಚಿ,ಪಟಾಕಿ ಸಿಡಿಸಿ ಸಂಭ್ರಮಿಸಿದರು.ಜೊತೆಗೆ ದೋಸೆ ರುಚಿ ಸವಿದು ಖುಷಿ ಹಂಚಿಕೊಂಡರು.ಸಿಹಿ ತಿಂಡಿಗಳನ್ನು ಹಂಚಿ ಪರಸ್ಪರ ಶುಭಾಶಯಗಳನ್ನು ಸಲ್ಲಿಸಿದರು.

ಭಜನೆಯಿಂದ ಪರಿವರ್ತನೆ:

ಹರೀಶ್ ವೈ ಚಂದ್ರಮರವರ ನೇತೃತ್ವದಲ್ಲಿ ಉದಯವಾದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಊರಿನಲ್ಲಿ ಬದಲಾವಣೆಯ ವಾತಾವರಣ ನಿರ್ಮಾಣವಾಗಿದೆ.ಭಜನೆಯೊಂದಿಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಮಂಡಳಿಯ ಕಾರ್ಯವೈಖರಿ ಮೆಚ್ಚುವಂತದ್ದು. ಅತ್ಯಂತ ಖುಷಿಯಿಂದ ಎಲ್ಲರನ್ನು ಸೇರಿಸಿಕೊಂಡು ದೀಪಾವಳಿ ಸಂಭ್ರಮ‌ ಸಡಗರವನ್ನು ಆಚರಿಸುತ್ತಿರುವುದು ಸಂತೋಷ ತಂದಿದೆ.ಇಂತಹ ಕಾರ್ಯಕ್ರಮ‌ ನಿರಂತರವಾಗಿ ನಡೆಯಲಿ ಎಂದು ಸಂತೋಷ್ ಪಿ ಕೋಟ್ಯಾನ್ ತಿಳಿಸಿದರು.

Related posts

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya
error: Content is protected !!