September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ ದಂಧೆ ನಿಶ್ಚಿಂತೆಯಿಂದ ನಡೆಯುತ್ತಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ.


ತಾಲೂಕಿನಲ್ಲಿ ಹರಿಯುವ ನೇತ್ರಾವತಿ, ಪಲ್ಗುಣಿ ನದಿಯಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತಿದ್ದು ಗಣಿ ಮತ್ತು ಭೂ ವಿಜ್ಞಾನ, ಪೊಲೀಸ್‌, ಅರಣ್ಯ, ಕಂದಾಯ ಇಲಾಖೆ ಈ ದಂಧೆ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಧಿಕಾರ ಇದ್ದರೂ ಮೌನವಾಗಿವೆ ಎಂದು ಆರೋಪಿಸಿದರು.


ತಾಲೂಕಿನಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತದ ನಿಷೇಧವಿದ್ದರೂ, ಕಾನೂನಿನ ಯಾವುದೇ ಹಂಗಿಲ್ಲದೆ ನಿಷೇಧಿತ ನದಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಗೆ ನಿರಂತರವಾಗಿ ನಡೆಯುತ್ತಲೇ ಇದೆ. ಸರಕಾರ, ಜಿಲ್ಲಾಧಿಕಾರಿ ಆದೇಶಕ್ಕೆ ಕವಡೇ ಕಾಸಿನ ಬೆಲೆ ಇಲ್ಲದಂತಾಗಿದೆ. ಅಕ್ರಮ ಮರಳು ದಂಧೆ ವಿರುದ್ಧ ಇಲಾಖೆಗಳ ಯಾವೊಬ್ಬ ಅಧಿಕಾರಿ, ಸಿಬ್ಬಂದಿ ಕಾನೂನು ಕ್ರಮಕ್ಕೆ ಮುಂದಾಗುತ್ತಿಲ್ಲ.
ಅಕ್ರಮ ಮರಳು ದಂಧೆ ಕುರಿತಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಖಚಿತ ಮಾಹಿತಿ ನೀಡಿದರೂ ಕಾನೂನು ಕ್ರಮ ಜರುಗುತ್ತಿಲ್ಲ. ಅಧಿಕಾರಿಗಳು ಮೌನವಾಗಿರುವ ಕಾರಣ ದಂಧೆ ಯಥೇಚ್ಛವಾಗಿ ಸಾಗಿದೆ ಎಂಬ ದೂರು ಸಾರ್ವಜನಿಕವಾಗಿ ಕೇಳಿಬಂದಿದೆ. ನದಿಯಿಂದ ರಾತ್ರಿ ಹೊತ್ತು ಪಿಕಪ್ ವಾಹನದಿಂದ ನದಿ ಪಾತ್ರದಲ್ಲಿ ಮರಳು ಸಂಗ್ರಹಿಸಿಟ್ಟು ಹಗಲು-ರಾತ್ರಿ ಲಾರಿಯಲ್ಲಿ ಸಾಗಣೆ ಮಾಡಲಾಗುತ್ತಿದೆ. ಪ್ರತಿದಿನ ಮರಳು ಅಕ್ರಮ ಸಾಗಣೆ ಆಗುತ್ತಿದ್ದು, ದಂಧೆಗೆ ಯಾವುದೇ ಕಡಿವಾಣ ಇಲ್ಲವಾಗಿದೆ. ಪ್ರಸ್ತುತ ನೇತ್ರಾವತಿ ಹಾಗೂ ಫಲ್ಗುಣಿ ನದಿ ತೀರಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಹೆಚ್ಚಿನ ಅಕ್ರಮ ಮರಳು ದಂಧೆಯು ತಾಲೂಕಿನ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂಬ ಆರೋಪವಿದೆ.


ಮಾನವ ಶ್ರಮದಿಂದಲೇ ಮರಳು ತೆಗೆಯಬೇಕೆಂಬ ನಿಯಮವಿದ್ದರೂ ನೇತ್ರಾವತಿ ಹಾಗೂ ಫಲ್ಗುಣಿ ನದಿ ಯುದ್ದಕ್ಕೂ ಅಕ್ರಮ ಮರಳು ದಂಧೆ ಕೋರರು ಜೆಸಿಬಿ, ಹಿಟಾಚಿ ಯಂತ್ರಗಳನ್ನು ನದಿಗೆ ಇಳಿಸಿ ಮರಳು ತೆಗೆಯುತ್ತಿದ್ದಾರೆ. ನದಿಯಿಂದ ತೆಗೆದ ಮರಳನ್ನು ರಾಷ್ಟ್ರೀಯ ಹೆದ್ದಾರಿಯ ಒಳಪ್ರದೇಶಗಳ ವಿಶಾಲವಾದ ಜಾಗದಲ್ಲಿ ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ, ತಾಲೂಕು ಆಡಳಿತ, ಭೂ ಮತ್ತು ಗಣಿ ಇಲಾಖಾಧಿಕಾರಿಗಳು ವೌನವಾಗಿದ್ದು, ಇದು ಮರಳು ದಂಧೆಕೋರರೊಂದಿಗೆ ಸಹಾಯಕವಾಗಿದೆ.
ಅಕ್ರಮ ಮರಳುಗಾರಿಕೆ ದಂಧೆ ನಡೆಸುತ್ತಿರುವವರ ವಿರುದ್ಧ ಇಲಾಖೆಯು ನಿರ್ಧಾಕ್ಷಿಣ್ಯ ಕಾನೂನು ಕ್ರಮ ಕೈಗೊಂಡು ಮರಳುಗಾರಿಕೆಗೆ ಕಡಿವಾಣ ಹಾಕಬೇಕೆಂದು ಅಶ್ಫಾಕ್ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ.

Related posts

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya
error: Content is protected !!