September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆಯು ವಕೀಲರ ಭವನದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ನ್ಯಾಯಾಧೀಶರಾದ ಮನು ಬಿ ಕೆ ದೀಪಾವಳಿಯ ಬಗ್ಗೆ ಪ್ರಾಸ್ತವಿಕ ಮಾತುಗಳನ್ನಾಡಿದರು. ದೀಪಾವಳಿ ಹಬ್ಬದ ಮಹತ್ವದ ಬಗ್ಗೆ ಬೆಳ್ತಂಗಡಿ ವಕೀಲರ ಸಂಘದ ಸದಸ್ಯ ನ್ಯಾಯವಾದಿ ಶ್ರೀಕೃಷ್ಣ ಶೆಣೈ ಬಹಳ ಅರ್ಥವತ್ತಾಗಿ ವಿವರಿಸಿದರು.


ಅಧ್ಯಕ್ಷೀಯ ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿದರು.
ವೇದಿಕೆಯಲ್ಲಿ ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಹಾಗೂ ಕೋಶಾಧಿಕಾರಿ ಪ್ರಶಾಂತ್ ಎಂ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವೈವಾಹಿಕ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಬಿ ಕೆ ಧನಂಜಯ ರಾವ್ ಹಾಗೂ ಶ್ರೀಮತಿ ರಾಜರ್ಷಿ ದಂಪತಿಗಳನ್ನು ಗೌರವಿಸಲಾಯಿತು.
ಹಿರಿಯ ವಕೀಲರಾದ ಬಿ ಕೆ ಧನಂಜಯ ರಾವ್ ಎಲ್ಲರಿಗೂ ಉಪಹಾರದ ವ್ಯವಸ್ಥೆಯನ್ನು ಏರ್ಪಡಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಪ್ರತೀಕ್ಷಾ ಹಾಗೂ ಸಮೂಹ ಗಾಯನವನ್ನು ಅಕ್ಷಯ್ ಕುಮಾರ್ ಮತ್ತು ಉಷಾ ಎನ್ ಜೀ ತಂಡದವರು ನೆರವೇರಿಸಿದರು. ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಸ್ವಾಗತಿಸಿದರು. ವಕೀಲರಾದ ಹರ್ಷಿತ್ ಕುಮಾರ್ ಹಾಗೂ ಸಂಧ್ಯಾ ರವರು ನಿರೂಪಿಸಿದರು. ಡಿ ಧನಂಜಯ ಕುಮಾರ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya
error: Content is protected !!