25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಮೇರಿ ಮಾತಾ ರಿಜಿಯನ್‌ನ ನಾಲ್ವರು ಭಗೀನಿಯರ ವೃತ ಸ್ವೀಕಾರದ ಸುವರ್ಣ ಸಂಭ್ರಮ ಮತ್ತು ರಜತ ಸಂಭ್ರಮವನ್ನು ನೆಲ್ಯಾಡಿಯಲ್ಲಿ ಆಚರಿಸಲಾಯಿತು. “ಆದ್ಯಾತ್ಮ ಮತ್ತು ಸೇವೆಯ ಮೂಲಕ ಭಗೀನಿಯರು ಪ್ರಭು ಯೇಸುಕ್ರಿಸ್ತನ ಜೀವನ ಮತ್ತು ಅವರ ಬದುಕಿನ ನೇರ ಪ್ರಾತ್ಯಕ್ಷತೆ ತಮ್ಮ ಬದುಕಿನಲ್ಲಿ ಒದಗಿಸುತ್ತಿದ್ದಾರೆ,” ಎಂದು ಇವರನ್ನು ಅಭಿನಂದಿಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿವಂದನೀಯ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಹೇಳಿದರು.

ಸಮಾರಂಭದಲ್ಲಿ ಸಿಸ್ಟರ್ ಫಿಲೋಮಿನ ಕುರಿಯನ್ ಮತ್ತು ಸಿಸ್ಟರ್ ಆನಿ ಕುರಿಯನ್ ಸುವರ್ಣ ಸಂಭ್ರಮವನ್ನು ಹಾಗೂ ಸಿಸ್ಟರ್ ಮೇಬಿಲ್ ಜೋನ್ ಮತ್ತು ಸಿಸ್ಟರ್ ಜಿನ್ಸಿ ರೋಸ್ ರಜತ ಮಹೋತ್ಸವವನ್ನು ಆಚರಿಸಿದರು. ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನೀಯ ಫಾ. ಶಾಜಿ ಮಾತ್ಯು ಹಾಗೂ ರಿಜಿನಲ್ ಸುಪೀರಿಯರ್ ಲಿಸ್ ಮಾತ್ಯು ಶುಭ ಕೋರಿದರು. ಹೆಗ್ಗಳದ ವಂದನೀಯ ಫಾ. ರೋಷನ್ ಪುದುಶೇರಿ ಮತ್ತು ಬಜಗೋಳಿಯ ಫಾ. ತೋಮಸ್ ಪಾರೆಕಾಟ್ಟಿಲ್ ಬಲಿಪೂಜೆಯಲ್ಲಿ ಭಾಗವಹಿಸಿದರು. ವಂದನೀಯ ಸಿಸ್ಟರ್ ಎಲ್ಸಿಲಿಟ್, ಸಿಸ್ಟರ್ ಬ್ಲೆಸಿಮರಿಯ, ಸಿಸ್ಟರ್ ಆಲ್ಫಿ, ಸಿಸ್ಟರ್ ತೆರೆಸ್ ಕುರಿಯನ್, ಸಿಸ್ಟರ್ ಆಲಿಸ್, ಸಿಸ್ಟರ್ ಸೌಮ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya
error: Content is protected !!