22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

ಅರಸಿನಮಕ್ಕಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ ರವರು ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಆಗ್ರಹಿಸಿದರು. ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಧರ್ಮರಾಜ್ ಅಡ್ಕಾಡಿ ಹಾಗೂ ಉಪಾಧ್ಯಕ್ಷ ಸುಧೀರ್ ಕುಮಾರ್ ಕಸ್ತೂರಿ ರಂಗನ್ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ. ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ, ಬಿಜಪಿ ಮುಖಂಡ ಗಣೇಶ್ ಹೊಸ್ತೋಟ, ಗ್ರಾ.ಪಂ ಮಾಜಿ ಸದಸ್ಯ ಸುಂದರ ಗೌಡ ಉಡ್ಯೆರೆ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ನವೀನ್ ರೆಖ್ಯ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗಣೇಶ್ ಹೊಸ್ತೋಟ ಧನ್ಯವಾದವಿತ್ತರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya
error: Content is protected !!