25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲಾ ಸಭಾಂಗಣದಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಎಂಬ ಕಾರ್ಯಗಾರವನ್ನು ಎಸ್ ಡಿ ಎಮ್ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ನ.6 ರಂದು ಆಯೋಜಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೊ ವಹಿಸಿದರು. ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಧ್ಯಾಪಕ ತಿರುಮಲೇಶ್ ರಾವ್ ಏನ್ ಕೆ, ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ಪ್ರಾಣಿ ಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕ ಡಾ. ದೀಪಕ್ ನಾಯಕ್ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲರು ಚಿಟ್ಟೆಗಳ ಜೈವಿಕ ನಡವಳಿಕೆ ಮತ್ತು ಪರಿಸರ ವ್ಯವಸ್ಥೆಯಲ್ಲಿ ಅವುಗಳ ಪಾತ್ರದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಸಂಪನ್ಮೂಲ ವ್ಯಕ್ತಿಯಾದ ಡಾ.ದೀಪಕ್ ನಾಯಕ್ ಅವರು ಚಿಟ್ಟೆಗಳ ವರ್ತನೆಯ ಮಾದರಿಗಳ ಬಗ್ಗೆ ಅಮೂಲ್ಯವಾದ ಜ್ಞಾನವನ್ನು ನೀಡಿದರು ಹಾಗೂ ವಿದ್ಯಾರ್ಥಿಗಳಲ್ಲಿ ಪ್ರಾಣಿಶಾಸ್ತ್ರದ ತಿಳುವಳಿಕೆಯನ್ನು ಮೂಡಿಸಿದರು.

ಪ್ರಶಿಕ್ಷಣಾರ್ಥಿ ಜಿಸ್ನಾ ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿ, ಅಖಿಲ ವಂದಿಸಿದರು.

Related posts

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!