July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.8 ರಂದು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದ ವಿಶೇಷತೆ: ಕಂಪ್ಯೂಟರೀಕೃತ ಕಣ್ಣಿನ ಉಚಿತ ತಪಾಸಣೆ ನಡೆಸಲಾಗುವುದು. 5ರಿಂದ 15 ವಯಸ್ಸಿನವರೆಗೆ ಕಣ್ಣಿನ ತೊಂದರೆ ಇರುವ ಮಕ್ಕಳಿಗೆ ಶಿಬಿರದ ಪ್ರಯುಕ್ತ ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುವುದು. ಶಿಬಿರದಲ್ಲಿ ಸಮೀಪ ದೃಷ್ಟಿ (Near Vision) ತೊಂದರೆಯವರಿಗೆ ಉಚಿತ ಕನ್ನಡಕವನ್ನು ವಿತರಿಸಲಾಗುವುದು. 15 ವಯಸ್ಸಿಗಿಂತ ಮೇಲ್ಪಟ್ಟು ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ಅಗತ್ಯವುಳ್ಳವರಿಗೆ ಕನ್ನಡಕವನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುವುದು. ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಗುವುದು. ಶಿಬಿರದಲ್ಲಿ ನೇತ್ರದಾನದ ಬಗ್ಗೆ ಮಾಹಿತಿ ನೀಡಲಾಗುವುದು.

Related posts

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya
error: Content is protected !!