23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

ಶಿಬಾಜೆ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ ರವರು ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಸಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಿಬಾಜೆ ಗ್ರಾ. ಪಂಚಾಯತ್ ಅಧ್ಯಕ್ಷೆ ರತ್ನ, ಉಪಾಧ್ಯಕ್ಷ ದಿನಕರ್ ಕುರುಪ್, ನಿಕಟಪೂರ್ವ ಉಪಾಧ್ಯಕ್ಷ ವಿನಯ ಚಂದ್ರ ಟಿ., ಮಾಜಿ ಉಪಾಧ್ಯಕ್ಷ ಪರಮೇಶ್ವರ ಪೂಜಾರಿ, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಮಹೇಶ್ ಶೆಟ್ಟಿಗಾರ್, ರಮೇಶ್ ಕುರುಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಜಯರಾಮ್ ಶಿಬಾಜೆ ಸ್ವಾಗತಿಸಿ, ಧನ್ಯವಾದವಿತ್ತರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya
error: Content is protected !!