July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಹಬ್ಬದ ಆಚರಣೆಯು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಮಾತನಾಡಿ ದೀಪಾವಳಿ ನಮ್ಮೆಲ್ಲರ ಬಾಳಿನಲ್ಲಿ ವರ್ಷವನ್ನು ತರಲಿ. ಕಷ್ಟ ನಷ್ಟಗಳು ದೂರವಾಗಿ ನೆಮ್ಮದಿ ನೆಲೆಸಲಿ ಎಂದರು.

ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ ಎಲ್ಲರನ್ನು ಸ್ವಾಗತಿಸಿ, ಸತ್ಕರಿಸಿದರು.

ಈ ಸಂದರ್ಭದಲ್ಲಿ ಬಳಂಜ ಬಿಲ್ಲವ ಸಂಘದ ನಿರ್ದೆಶಕ ರಂಜಿತ್ ಪೂಜಾರಿ,ಯುವ ಉದ್ಯಮಿ ಅಶ್ವಿನ್ ಬಿ.ಕೆ.,ಯುವಶಕ್ತಿ ಫ್ರೆಂಡ್ಸ್ ಕ್ಲಬ್ ಸದಸ್ಯರಾದ ಸಂಪತ್ ಪಿ ಕೋಟ್ಯಾನ್, ಪ್ರಣಾಮ್ ಶೆಟ್ಟಿ ನಾಲ್ಕೂರು,ಅಮೃತ ಎಸ್ ಕೋಟ್ಯಾನ್, ಕೆಸರು ಗದ್ದೆ ಕ್ರೀಡಾಕೂಟ ಸಂಚಾಲಕ ಸುರೇಶ್ ಪೂಜಾರಿ ಪಾಡಿ, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಅಧ್ಯಕ್ಷೆ ಜ್ಯೋತಿ, ತರಬೇತುದಾರರಾದ ಮಾನ್ಯ, ಮಂಡಳಿಯ ಸದಸ್ಯರ ಪೋಷಕರು,ಬಳಂಜ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.

ಹಣತೆ ಹಚ್ಚಿ,ಪಟಾಕಿ ಸಿಡಿಸಿ ಸಂಭ್ರಮ

ಕುಣಿತಾ ಭಜನಾ ಮಂಡಳಿ ಸದಸ್ಯರು ಸಂಘದ ಸುತ್ತ ಮುತ್ತ,ಬೊಳ್ಳಜ್ಜ ದೈವದ ಕಟ್ಟೆಯಲ್ಲೂ ದೀಪ ಹಚ್ಚಿದರು.ಹಣತೆ ದೀಪ ಹಚ್ಚಿ,ಪಟಾಕಿ ಸಿಡಿಸಿ ಸಂಭ್ರಮಿಸಿದರು.ಜೊತೆಗೆ ದೋಸೆ ರುಚಿ ಸವಿದು ಖುಷಿ ಹಂಚಿಕೊಂಡರು.ಸಿಹಿ ತಿಂಡಿಗಳನ್ನು ಹಂಚಿ ಪರಸ್ಪರ ಶುಭಾಶಯಗಳನ್ನು ಸಲ್ಲಿಸಿದರು.

ಭಜನೆಯಿಂದ ಪರಿವರ್ತನೆ:

ಹರೀಶ್ ವೈ ಚಂದ್ರಮರವರ ನೇತೃತ್ವದಲ್ಲಿ ಉದಯವಾದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಊರಿನಲ್ಲಿ ಬದಲಾವಣೆಯ ವಾತಾವರಣ ನಿರ್ಮಾಣವಾಗಿದೆ.ಭಜನೆಯೊಂದಿಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಮಂಡಳಿಯ ಕಾರ್ಯವೈಖರಿ ಮೆಚ್ಚುವಂತದ್ದು. ಅತ್ಯಂತ ಖುಷಿಯಿಂದ ಎಲ್ಲರನ್ನು ಸೇರಿಸಿಕೊಂಡು ದೀಪಾವಳಿ ಸಂಭ್ರಮ‌ ಸಡಗರವನ್ನು ಆಚರಿಸುತ್ತಿರುವುದು ಸಂತೋಷ ತಂದಿದೆ.ಇಂತಹ ಕಾರ್ಯಕ್ರಮ‌ ನಿರಂತರವಾಗಿ ನಡೆಯಲಿ ಎಂದು ಸಂತೋಷ್ ಪಿ ಕೋಟ್ಯಾನ್ ತಿಳಿಸಿದರು.

Related posts

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya
error: Content is protected !!