23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆಯು ವಕೀಲರ ಭವನದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ನ್ಯಾಯಾಧೀಶರಾದ ಮನು ಬಿ ಕೆ ದೀಪಾವಳಿಯ ಬಗ್ಗೆ ಪ್ರಾಸ್ತವಿಕ ಮಾತುಗಳನ್ನಾಡಿದರು. ದೀಪಾವಳಿ ಹಬ್ಬದ ಮಹತ್ವದ ಬಗ್ಗೆ ಬೆಳ್ತಂಗಡಿ ವಕೀಲರ ಸಂಘದ ಸದಸ್ಯ ನ್ಯಾಯವಾದಿ ಶ್ರೀಕೃಷ್ಣ ಶೆಣೈ ಬಹಳ ಅರ್ಥವತ್ತಾಗಿ ವಿವರಿಸಿದರು.


ಅಧ್ಯಕ್ಷೀಯ ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿದರು.
ವೇದಿಕೆಯಲ್ಲಿ ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಹಾಗೂ ಕೋಶಾಧಿಕಾರಿ ಪ್ರಶಾಂತ್ ಎಂ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವೈವಾಹಿಕ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಬಿ ಕೆ ಧನಂಜಯ ರಾವ್ ಹಾಗೂ ಶ್ರೀಮತಿ ರಾಜರ್ಷಿ ದಂಪತಿಗಳನ್ನು ಗೌರವಿಸಲಾಯಿತು.
ಹಿರಿಯ ವಕೀಲರಾದ ಬಿ ಕೆ ಧನಂಜಯ ರಾವ್ ಎಲ್ಲರಿಗೂ ಉಪಹಾರದ ವ್ಯವಸ್ಥೆಯನ್ನು ಏರ್ಪಡಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಪ್ರತೀಕ್ಷಾ ಹಾಗೂ ಸಮೂಹ ಗಾಯನವನ್ನು ಅಕ್ಷಯ್ ಕುಮಾರ್ ಮತ್ತು ಉಷಾ ಎನ್ ಜೀ ತಂಡದವರು ನೆರವೇರಿಸಿದರು. ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಸ್ವಾಗತಿಸಿದರು. ವಕೀಲರಾದ ಹರ್ಷಿತ್ ಕುಮಾರ್ ಹಾಗೂ ಸಂಧ್ಯಾ ರವರು ನಿರೂಪಿಸಿದರು. ಡಿ ಧನಂಜಯ ಕುಮಾರ್ ಧನ್ಯವಾದವಿತ್ತರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya
error: Content is protected !!