September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆಯು ವಕೀಲರ ಭವನದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಲಯದ ನ್ಯಾಯಾಧೀಶರಾದ ಮನು ಬಿ ಕೆ ದೀಪಾವಳಿಯ ಬಗ್ಗೆ ಪ್ರಾಸ್ತವಿಕ ಮಾತುಗಳನ್ನಾಡಿದರು. ದೀಪಾವಳಿ ಹಬ್ಬದ ಮಹತ್ವದ ಬಗ್ಗೆ ಬೆಳ್ತಂಗಡಿ ವಕೀಲರ ಸಂಘದ ಸದಸ್ಯ ನ್ಯಾಯವಾದಿ ಶ್ರೀಕೃಷ್ಣ ಶೆಣೈ ಬಹಳ ಅರ್ಥವತ್ತಾಗಿ ವಿವರಿಸಿದರು.


ಅಧ್ಯಕ್ಷೀಯ ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿದರು.
ವೇದಿಕೆಯಲ್ಲಿ ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಹಾಗೂ ಕೋಶಾಧಿಕಾರಿ ಪ್ರಶಾಂತ್ ಎಂ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವೈವಾಹಿಕ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಬಿ ಕೆ ಧನಂಜಯ ರಾವ್ ಹಾಗೂ ಶ್ರೀಮತಿ ರಾಜರ್ಷಿ ದಂಪತಿಗಳನ್ನು ಗೌರವಿಸಲಾಯಿತು.
ಹಿರಿಯ ವಕೀಲರಾದ ಬಿ ಕೆ ಧನಂಜಯ ರಾವ್ ಎಲ್ಲರಿಗೂ ಉಪಹಾರದ ವ್ಯವಸ್ಥೆಯನ್ನು ಏರ್ಪಡಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಪ್ರತೀಕ್ಷಾ ಹಾಗೂ ಸಮೂಹ ಗಾಯನವನ್ನು ಅಕ್ಷಯ್ ಕುಮಾರ್ ಮತ್ತು ಉಷಾ ಎನ್ ಜೀ ತಂಡದವರು ನೆರವೇರಿಸಿದರು. ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಸ್ವಾಗತಿಸಿದರು. ವಕೀಲರಾದ ಹರ್ಷಿತ್ ಕುಮಾರ್ ಹಾಗೂ ಸಂಧ್ಯಾ ರವರು ನಿರೂಪಿಸಿದರು. ಡಿ ಧನಂಜಯ ಕುಮಾರ್ ಧನ್ಯವಾದವಿತ್ತರು.

Related posts

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya
error: Content is protected !!