September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಮೇರಿ ಮಾತಾ ರಿಜಿಯನ್‌ನ ನಾಲ್ವರು ಭಗೀನಿಯರ ವೃತ ಸ್ವೀಕಾರದ ಸುವರ್ಣ ಸಂಭ್ರಮ ಮತ್ತು ರಜತ ಸಂಭ್ರಮವನ್ನು ನೆಲ್ಯಾಡಿಯಲ್ಲಿ ಆಚರಿಸಲಾಯಿತು. “ಆದ್ಯಾತ್ಮ ಮತ್ತು ಸೇವೆಯ ಮೂಲಕ ಭಗೀನಿಯರು ಪ್ರಭು ಯೇಸುಕ್ರಿಸ್ತನ ಜೀವನ ಮತ್ತು ಅವರ ಬದುಕಿನ ನೇರ ಪ್ರಾತ್ಯಕ್ಷತೆ ತಮ್ಮ ಬದುಕಿನಲ್ಲಿ ಒದಗಿಸುತ್ತಿದ್ದಾರೆ,” ಎಂದು ಇವರನ್ನು ಅಭಿನಂದಿಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿವಂದನೀಯ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಹೇಳಿದರು.

ಸಮಾರಂಭದಲ್ಲಿ ಸಿಸ್ಟರ್ ಫಿಲೋಮಿನ ಕುರಿಯನ್ ಮತ್ತು ಸಿಸ್ಟರ್ ಆನಿ ಕುರಿಯನ್ ಸುವರ್ಣ ಸಂಭ್ರಮವನ್ನು ಹಾಗೂ ಸಿಸ್ಟರ್ ಮೇಬಿಲ್ ಜೋನ್ ಮತ್ತು ಸಿಸ್ಟರ್ ಜಿನ್ಸಿ ರೋಸ್ ರಜತ ಮಹೋತ್ಸವವನ್ನು ಆಚರಿಸಿದರು. ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನೀಯ ಫಾ. ಶಾಜಿ ಮಾತ್ಯು ಹಾಗೂ ರಿಜಿನಲ್ ಸುಪೀರಿಯರ್ ಲಿಸ್ ಮಾತ್ಯು ಶುಭ ಕೋರಿದರು. ಹೆಗ್ಗಳದ ವಂದನೀಯ ಫಾ. ರೋಷನ್ ಪುದುಶೇರಿ ಮತ್ತು ಬಜಗೋಳಿಯ ಫಾ. ತೋಮಸ್ ಪಾರೆಕಾಟ್ಟಿಲ್ ಬಲಿಪೂಜೆಯಲ್ಲಿ ಭಾಗವಹಿಸಿದರು. ವಂದನೀಯ ಸಿಸ್ಟರ್ ಎಲ್ಸಿಲಿಟ್, ಸಿಸ್ಟರ್ ಬ್ಲೆಸಿಮರಿಯ, ಸಿಸ್ಟರ್ ಆಲ್ಫಿ, ಸಿಸ್ಟರ್ ತೆರೆಸ್ ಕುರಿಯನ್, ಸಿಸ್ಟರ್ ಆಲಿಸ್, ಸಿಸ್ಟರ್ ಸೌಮ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಕನ್ಯಾಡಿ, ಪಡ್ಪು, ಸುರ್ಯ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಊಟಕ್ಕಿಲ್ಲದ ಉಪ್ಪಿನಕಾಯಿಂತಾದ ಪಡ್ಪು ಏರ್‌ಟೆಲ್ ಟವರ್

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ನಿಧನ

Suddi Udaya
error: Content is protected !!