September 6, 2026
ಗ್ರಾಮಾಂತರ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣಗೊಳಿಸಿದೆ.

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿಯ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರಗುವ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ನ.22. ರಂದು ತಾಲೂಕು ಅಧಿವೇಶನ ನರಸಿಂಹ ಘಡದ(ಗಡಾಯಿಕಲ್ಲು) ತಪ್ಪಲು ‘ಬಲಿಪ ರೆಸಾರ್ಟ್’ನಲ್ಲಿ ನಡೆಯಲಿದೆ.

ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಪ.ರಾಮಕೃಷ್ಣ ಶಾಸ್ತ್ರಿ ಅಧಿವೇಶನದ ತಯಾರಿಗಳ ಕುರಿತಾಗಿ ಹರ್ಷ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅ.ಭಾ.ಸಾ.ಪ ಬೆಳ್ತಂಗಡಿ ಸಮಿತಿ ಅಧ್ಯಕ್ಷರಾದ ಪ್ರೊ.ಗಣಪತಿ ಭಟ್ ಕುಳಮರ್ವ, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ, ಕೋಶಾಧಿಕಾರಿ ಶ್ರೀ ಕೇಶವಭಟ್ ಅತ್ತಾಜೆ, . ಸಹ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡ, ಉಪಾಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್, ವಿದ್ಯಾರ್ಥಿ ಪ್ರಕಾರ ಪ್ರಮುಖ್ ಶ್ರೀ ಮಹಾಬಲ ಗೌಡ.ವಿಭಾಗ ಸಂಯೋಜಕರಾದ ಶ್ರೀ ಸುಂದರ ಶೆಟ್ಟಿ ಇಳಂತಿಲ , ಶ್ರೀ ಶಿವಪ್ರಸಾದ್ ಸುರ್ಯ ಮೊದಲಾದವರು ಉಪಸ್ಥಿತರಿದ್ದರು

Related posts

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya
error: Content is protected !!