March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ.

ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ ಮನೆಯ ಹತ್ತಿರ ಪ್ರತ್ಯೇಕ ಮನೆಯಲ್ಲಿ ವಾಸಮಾಡಿಕೊಂಡಿರುತ್ತಾರೆ. ಹರೀಶ್ ರ ತಮ್ಮನು ಸುಮಾರು ಎರಡು ವರ್ಷಗಳಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿದ್ದು ಇದಕ್ಕೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ.ಅಲ್ಲದೇ ಆತನು ಲಿವರ್ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಈ ಎಲ್ಲಾ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾದವನು 01 ತಿಂಗಳ ಹಿಂದೆ ಮಂಗಳೂರು ಪಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿರುತ್ತಾನೆ. ನ.07 ರಂದು ಬೆಳಿಗ್ಗೆ ಅವಧಿಯಲ್ಲಿ ಆತನಿಗಿದ್ದ ಮಾನಸಿಕ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜೀಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಯು ಡಿಆರ್ ನಂಬ್ರ: 24-2024 ಕಲಂ:194 BNSS ಪ್ರಕರಣ ದಾಖಲಾಗಿರುತ್ತದೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya
error: Content is protected !!