July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ.

ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ ಮನೆಯ ಹತ್ತಿರ ಪ್ರತ್ಯೇಕ ಮನೆಯಲ್ಲಿ ವಾಸಮಾಡಿಕೊಂಡಿರುತ್ತಾರೆ. ಹರೀಶ್ ರ ತಮ್ಮನು ಸುಮಾರು ಎರಡು ವರ್ಷಗಳಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿದ್ದು ಇದಕ್ಕೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ.ಅಲ್ಲದೇ ಆತನು ಲಿವರ್ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಈ ಎಲ್ಲಾ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾದವನು 01 ತಿಂಗಳ ಹಿಂದೆ ಮಂಗಳೂರು ಪಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿರುತ್ತಾನೆ. ನ.07 ರಂದು ಬೆಳಿಗ್ಗೆ ಅವಧಿಯಲ್ಲಿ ಆತನಿಗಿದ್ದ ಮಾನಸಿಕ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜೀಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಯು ಡಿಆರ್ ನಂಬ್ರ: 24-2024 ಕಲಂ:194 BNSS ಪ್ರಕರಣ ದಾಖಲಾಗಿರುತ್ತದೆ.

Related posts

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya
error: Content is protected !!