23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಳ್ತಂಗಡಿ ತಾಲೂಕು ಶಾಖೆಯ 2024-29ನೇ ಅವಧಿಯ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ವಿವಾದ ಉಂಟಾದಾಗಿ ಇಬ್ಬರು ಶಿಕ್ಷಕರು ಪೊಲೀಸ್ ಠಾಣೆಯ ಮೇಟ್ಟಿಲೇರಿದರೆ, ಇದೀಗ ಚುನಾವಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿಲಾಗಿದ್ದು, ಇದರ ಬಗ್ಗೆ ಸೂಕ್ತ ವಿವರಣೆ ನೀಡುವಂತೆ ಸಂಘದ ಮೂರು ಮಂದಿ ನಿರ್ದೇಶಕರು ಚುನಾವಣಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ನಿರ್ದೇಶಕರಾದ ಪ್ರಶಾಂತ್ ಡಿ.ಬಳೆಂಜ, ಪ್ರದೀಪ್ ಕುಮಾರ್, ಕೆ. ಸದಾಶಿವ ರಾವ್ ‌ಈ ಮನವಿಯನ್ನು ನೀಡಿದ್ದಾರೆ.
ಮನವಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಆದೇಶ, ನೋಟೀಸುಗಳನ್ನು ಸಂಘದ ಸದಸ್ಯರಿಗೆ ತಿಳಿಯಪಡಿಸಲು ಸೂಕ್ತ ನೋಟೀಸು ಬೋರ್ಡ್ ಇರುವುದಿಲ್ಲ. ಆದೇಶ, ನೋಟೀಸುಗಳನ್ನು ಸಂಘದ ಕಛೇರಿ ಕಟ್ಟಡದ ಗೋಡೆಗೆ ಅಂಟಿಸಿ ಪ್ರಚುರ ಪಡಿಸಲಾಗಿದೆ.
ನಾಮಪತ್ರ ತಿರಸ್ಕೃತಗೊಂಡ ಸದಸ್ಯರಿಗೆ ಯಾವ ಕಾರಣಕ್ಕಾಗಿ ನಾಮಪತ್ರ ತಿರಸ್ಕೃತಗೊಂಡಿದೆ
ಯೆಂದು ಲಿಖಿತವಾಗಿ ಈ ದಿನದವರೆಗೆ ತಿಳಿಸಿರುವುದಿಲ್ಲ ಮತ್ತು ತಿರಸ್ಕೃತಗೊಂಡವರ ಠೇವಣಿಯನ್ನು ಹಿಂತಿರುಗಿಸಿರುವುದಿಲ್ಲ.
ಈ ಸಂಘದ ಅಧ್ಯಕ್ಷ, ಕೋಶಾಧಿಕಾರಿ ಮತ್ತು ರಾಜ್ಯ ಪರಿಷತ್ ಹುದ್ದೆಗೆ ಸ್ಪರ್ಧಿಸುವವರಿಗೆ ಚಿಹ್ನೆಯನ್ನು ಆಯ್ಕೆ ಮಾಡಲು ಸೂಕ್ತ ವ್ಯವಸ್ಥೆಯನ್ನು ಮಾಡಿರುವುದಿಲ್ಲ. ಇದರಿಂದಾಗಿ ಮತ ಕೇಳಲು, ಪ್ರಚಾರ ಮಾಡಲು ತೊಂದರೆಯಾಗಿರುತ್ತದೆ.
ಈ ವರೆಗೆ ಚುನಾವಣಾ ಸಿಬ್ಬಂದಿಯನ್ನು ನೇಮಕ ಮಾಡಿರುವ ಬಗ್ಗೆ ಘೋಷಣೆ ಮಾಡಿರುವುದಿಲ್ಲ. ಚುನಾವಣಾ ಪ್ರಕ್ರಿಯೆಯ ವಿವರವನ್ನು ಆರಂಭದಿಂದ ಇಲ್ಲಿಯವರೆಗೆ ಇಲಾಖಾ ಮುಖ್ಯಸ್ಥರಿಗೆ, ದೃಶ್ಯ ಮತ್ತು ಮುದ್ರಣ ಮಾಧ್ಯಮದವರಿಗೆ ಲಿಖಿತವಾಗಿ ನೀಡಿರುವುದಿಲ್ಲ.
ನ. 16 ರಂದು ನಡೆಯುವ ಚುನಾವಣಾ ಪ್ರಕ್ರಿಯೆಯ ವಿವರವನ್ನು ಲಿಖಿತವಾಗಿ ಚುನಾಯಿತ ನಿರ್ದೇಶಕರಿಗೆ ನೀಡಿರುವುದಿಲ್ಲ ಎಂಬ ಅಂಶಗಳನ್ನು ಉಲ್ಲೇಖಿಸಿ, ಇದರ ಬಗ್ಗೆ ಕೂಡಲೇ ನೀಡುವಂತೆ ವಿನಂತಿಸಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಇದುವರೆಗೆ ಅವಿರೋಧ ಆಯ್ಕೆಗಳೇ ನಡೆದಿದ್ದು, ಇತಿಹಾಸದಲ್ಲಿ
ಪೊಲೀಸ್ ಠಾಣೆಯ ಮೇಟ್ಟಿಲೇರಿದ ಪ್ರಕರಣ ನಡೆದಿರುವುದು ಇದು ಪ್ರಥಮವಾಗಿದೆ.

Related posts

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya
error: Content is protected !!