Uncategorized

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಳ್ತಂಗಡಿ ತಾಲೂಕು ಶಾಖೆಯ 2024-29ನೇ ಅವಧಿಯ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ವಿವಾದ ಉಂಟಾದಾಗಿ ಇಬ್ಬರು ಶಿಕ್ಷಕರು ಪೊಲೀಸ್ ಠಾಣೆಯ ಮೇಟ್ಟಿಲೇರಿದರೆ, ಇದೀಗ ಚುನಾವಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿಲಾಗಿದ್ದು, ಇದರ ಬಗ್ಗೆ ಸೂಕ್ತ ವಿವರಣೆ ನೀಡುವಂತೆ ಸಂಘದ ಮೂರು ಮಂದಿ ನಿರ್ದೇಶಕರು ಚುನಾವಣಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ನಿರ್ದೇಶಕರಾದ ಪ್ರಶಾಂತ್ ಡಿ.ಬಳೆಂಜ, ಪ್ರದೀಪ್ ಕುಮಾರ್, ಕೆ. ಸದಾಶಿವ ರಾವ್ ‌ಈ ಮನವಿಯನ್ನು ನೀಡಿದ್ದಾರೆ.
ಮನವಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಆದೇಶ, ನೋಟೀಸುಗಳನ್ನು ಸಂಘದ ಸದಸ್ಯರಿಗೆ ತಿಳಿಯಪಡಿಸಲು ಸೂಕ್ತ ನೋಟೀಸು ಬೋರ್ಡ್ ಇರುವುದಿಲ್ಲ. ಆದೇಶ, ನೋಟೀಸುಗಳನ್ನು ಸಂಘದ ಕಛೇರಿ ಕಟ್ಟಡದ ಗೋಡೆಗೆ ಅಂಟಿಸಿ ಪ್ರಚುರ ಪಡಿಸಲಾಗಿದೆ.
ನಾಮಪತ್ರ ತಿರಸ್ಕೃತಗೊಂಡ ಸದಸ್ಯರಿಗೆ ಯಾವ ಕಾರಣಕ್ಕಾಗಿ ನಾಮಪತ್ರ ತಿರಸ್ಕೃತಗೊಂಡಿದೆ
ಯೆಂದು ಲಿಖಿತವಾಗಿ ಈ ದಿನದವರೆಗೆ ತಿಳಿಸಿರುವುದಿಲ್ಲ ಮತ್ತು ತಿರಸ್ಕೃತಗೊಂಡವರ ಠೇವಣಿಯನ್ನು ಹಿಂತಿರುಗಿಸಿರುವುದಿಲ್ಲ.
ಈ ಸಂಘದ ಅಧ್ಯಕ್ಷ, ಕೋಶಾಧಿಕಾರಿ ಮತ್ತು ರಾಜ್ಯ ಪರಿಷತ್ ಹುದ್ದೆಗೆ ಸ್ಪರ್ಧಿಸುವವರಿಗೆ ಚಿಹ್ನೆಯನ್ನು ಆಯ್ಕೆ ಮಾಡಲು ಸೂಕ್ತ ವ್ಯವಸ್ಥೆಯನ್ನು ಮಾಡಿರುವುದಿಲ್ಲ. ಇದರಿಂದಾಗಿ ಮತ ಕೇಳಲು, ಪ್ರಚಾರ ಮಾಡಲು ತೊಂದರೆಯಾಗಿರುತ್ತದೆ.
ಈ ವರೆಗೆ ಚುನಾವಣಾ ಸಿಬ್ಬಂದಿಯನ್ನು ನೇಮಕ ಮಾಡಿರುವ ಬಗ್ಗೆ ಘೋಷಣೆ ಮಾಡಿರುವುದಿಲ್ಲ. ಚುನಾವಣಾ ಪ್ರಕ್ರಿಯೆಯ ವಿವರವನ್ನು ಆರಂಭದಿಂದ ಇಲ್ಲಿಯವರೆಗೆ ಇಲಾಖಾ ಮುಖ್ಯಸ್ಥರಿಗೆ, ದೃಶ್ಯ ಮತ್ತು ಮುದ್ರಣ ಮಾಧ್ಯಮದವರಿಗೆ ಲಿಖಿತವಾಗಿ ನೀಡಿರುವುದಿಲ್ಲ.
ನ. 16 ರಂದು ನಡೆಯುವ ಚುನಾವಣಾ ಪ್ರಕ್ರಿಯೆಯ ವಿವರವನ್ನು ಲಿಖಿತವಾಗಿ ಚುನಾಯಿತ ನಿರ್ದೇಶಕರಿಗೆ ನೀಡಿರುವುದಿಲ್ಲ ಎಂಬ ಅಂಶಗಳನ್ನು ಉಲ್ಲೇಖಿಸಿ, ಇದರ ಬಗ್ಗೆ ಕೂಡಲೇ ನೀಡುವಂತೆ ವಿನಂತಿಸಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಇದುವರೆಗೆ ಅವಿರೋಧ ಆಯ್ಕೆಗಳೇ ನಡೆದಿದ್ದು, ಇತಿಹಾಸದಲ್ಲಿ
ಪೊಲೀಸ್ ಠಾಣೆಯ ಮೇಟ್ಟಿಲೇರಿದ ಪ್ರಕರಣ ನಡೆದಿರುವುದು ಇದು ಪ್ರಥಮವಾಗಿದೆ.

Related posts

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

Suddi Udaya
error: Content is protected !!