July 23, 2026
Uncategorized

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಳ್ತಂಗಡಿ ತಾಲೂಕು ಶಾಖೆಯ 2024-29ನೇ ಅವಧಿಯ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ವಿವಾದ ಉಂಟಾದಾಗಿ ಇಬ್ಬರು ಶಿಕ್ಷಕರು ಪೊಲೀಸ್ ಠಾಣೆಯ ಮೇಟ್ಟಿಲೇರಿದರೆ, ಇದೀಗ ಚುನಾವಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿಲಾಗಿದ್ದು, ಇದರ ಬಗ್ಗೆ ಸೂಕ್ತ ವಿವರಣೆ ನೀಡುವಂತೆ ಸಂಘದ ಮೂರು ಮಂದಿ ನಿರ್ದೇಶಕರು ಚುನಾವಣಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ನಿರ್ದೇಶಕರಾದ ಪ್ರಶಾಂತ್ ಡಿ.ಬಳೆಂಜ, ಪ್ರದೀಪ್ ಕುಮಾರ್, ಕೆ. ಸದಾಶಿವ ರಾವ್ ‌ಈ ಮನವಿಯನ್ನು ನೀಡಿದ್ದಾರೆ.
ಮನವಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಆದೇಶ, ನೋಟೀಸುಗಳನ್ನು ಸಂಘದ ಸದಸ್ಯರಿಗೆ ತಿಳಿಯಪಡಿಸಲು ಸೂಕ್ತ ನೋಟೀಸು ಬೋರ್ಡ್ ಇರುವುದಿಲ್ಲ. ಆದೇಶ, ನೋಟೀಸುಗಳನ್ನು ಸಂಘದ ಕಛೇರಿ ಕಟ್ಟಡದ ಗೋಡೆಗೆ ಅಂಟಿಸಿ ಪ್ರಚುರ ಪಡಿಸಲಾಗಿದೆ.
ನಾಮಪತ್ರ ತಿರಸ್ಕೃತಗೊಂಡ ಸದಸ್ಯರಿಗೆ ಯಾವ ಕಾರಣಕ್ಕಾಗಿ ನಾಮಪತ್ರ ತಿರಸ್ಕೃತಗೊಂಡಿದೆ
ಯೆಂದು ಲಿಖಿತವಾಗಿ ಈ ದಿನದವರೆಗೆ ತಿಳಿಸಿರುವುದಿಲ್ಲ ಮತ್ತು ತಿರಸ್ಕೃತಗೊಂಡವರ ಠೇವಣಿಯನ್ನು ಹಿಂತಿರುಗಿಸಿರುವುದಿಲ್ಲ.
ಈ ಸಂಘದ ಅಧ್ಯಕ್ಷ, ಕೋಶಾಧಿಕಾರಿ ಮತ್ತು ರಾಜ್ಯ ಪರಿಷತ್ ಹುದ್ದೆಗೆ ಸ್ಪರ್ಧಿಸುವವರಿಗೆ ಚಿಹ್ನೆಯನ್ನು ಆಯ್ಕೆ ಮಾಡಲು ಸೂಕ್ತ ವ್ಯವಸ್ಥೆಯನ್ನು ಮಾಡಿರುವುದಿಲ್ಲ. ಇದರಿಂದಾಗಿ ಮತ ಕೇಳಲು, ಪ್ರಚಾರ ಮಾಡಲು ತೊಂದರೆಯಾಗಿರುತ್ತದೆ.
ಈ ವರೆಗೆ ಚುನಾವಣಾ ಸಿಬ್ಬಂದಿಯನ್ನು ನೇಮಕ ಮಾಡಿರುವ ಬಗ್ಗೆ ಘೋಷಣೆ ಮಾಡಿರುವುದಿಲ್ಲ. ಚುನಾವಣಾ ಪ್ರಕ್ರಿಯೆಯ ವಿವರವನ್ನು ಆರಂಭದಿಂದ ಇಲ್ಲಿಯವರೆಗೆ ಇಲಾಖಾ ಮುಖ್ಯಸ್ಥರಿಗೆ, ದೃಶ್ಯ ಮತ್ತು ಮುದ್ರಣ ಮಾಧ್ಯಮದವರಿಗೆ ಲಿಖಿತವಾಗಿ ನೀಡಿರುವುದಿಲ್ಲ.
ನ. 16 ರಂದು ನಡೆಯುವ ಚುನಾವಣಾ ಪ್ರಕ್ರಿಯೆಯ ವಿವರವನ್ನು ಲಿಖಿತವಾಗಿ ಚುನಾಯಿತ ನಿರ್ದೇಶಕರಿಗೆ ನೀಡಿರುವುದಿಲ್ಲ ಎಂಬ ಅಂಶಗಳನ್ನು ಉಲ್ಲೇಖಿಸಿ, ಇದರ ಬಗ್ಗೆ ಕೂಡಲೇ ನೀಡುವಂತೆ ವಿನಂತಿಸಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಇದುವರೆಗೆ ಅವಿರೋಧ ಆಯ್ಕೆಗಳೇ ನಡೆದಿದ್ದು, ಇತಿಹಾಸದಲ್ಲಿ
ಪೊಲೀಸ್ ಠಾಣೆಯ ಮೇಟ್ಟಿಲೇರಿದ ಪ್ರಕರಣ ನಡೆದಿರುವುದು ಇದು ಪ್ರಥಮವಾಗಿದೆ.

Related posts

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya
error: Content is protected !!