23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.8 ರಂದು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಶಿಬಿರವನ್ನು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಹರೀಶ್ ಕೆ.ಬಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರು, ಎಸ್.ಡಿ.ಎಮ್.ಸಿ ಸದಸ್ಯರು, ಶಾಲಾ ಶಿಕ್ಷಕರು, ಊರಿನ ನಾಗರಿಕರು, ಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

ಶಿಬಿರದಲ್ಲಿ ಕಂಪ್ಯೂಟರೀಕೃತ ಕಣ್ಣಿನ ಉಚಿತ ತಪಾಸಣೆ, 5ರಿಂದ 15 ವಯಸ್ಸಿನವರೆಗೆ ಕಣ್ಣಿನ ತೊಂದರೆ ಇರುವ ಮಕ್ಕಳಿಗೆ ಶಿಬಿರದ ಪ್ರಯುಕ್ತ ಉಚಿತವಾಗಿ ಕನ್ನಡಕ ವಿತರಣೆ, ಶಿಬಿರದಲ್ಲಿ ಸಮೀಪ ದೃಷ್ಟಿ (Near Vision) ತೊಂದರೆಯವರಿಗೆ ಉಚಿತ ಕನ್ನಡಕ ವಿತರಣೆ, 15 ವಯಸ್ಸಿಗಿಂತ ಮೇಲ್ಪಟ್ಟು ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ಅಗತ್ಯವುಳ್ಳವರಿಗೆ ಕನ್ನಡಕ ರಿಯಾಯಿತಿ ದರದಲ್ಲಿ ವಿತರಣೆ ಹಾಗೂ ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಯಿತು.

Related posts

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya
error: Content is protected !!