25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.8 ರಂದು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಶಿಬಿರವನ್ನು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಹರೀಶ್ ಕೆ.ಬಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರು, ಎಸ್.ಡಿ.ಎಮ್.ಸಿ ಸದಸ್ಯರು, ಶಾಲಾ ಶಿಕ್ಷಕರು, ಊರಿನ ನಾಗರಿಕರು, ಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

ಶಿಬಿರದಲ್ಲಿ ಕಂಪ್ಯೂಟರೀಕೃತ ಕಣ್ಣಿನ ಉಚಿತ ತಪಾಸಣೆ, 5ರಿಂದ 15 ವಯಸ್ಸಿನವರೆಗೆ ಕಣ್ಣಿನ ತೊಂದರೆ ಇರುವ ಮಕ್ಕಳಿಗೆ ಶಿಬಿರದ ಪ್ರಯುಕ್ತ ಉಚಿತವಾಗಿ ಕನ್ನಡಕ ವಿತರಣೆ, ಶಿಬಿರದಲ್ಲಿ ಸಮೀಪ ದೃಷ್ಟಿ (Near Vision) ತೊಂದರೆಯವರಿಗೆ ಉಚಿತ ಕನ್ನಡಕ ವಿತರಣೆ, 15 ವಯಸ್ಸಿಗಿಂತ ಮೇಲ್ಪಟ್ಟು ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ಅಗತ್ಯವುಳ್ಳವರಿಗೆ ಕನ್ನಡಕ ರಿಯಾಯಿತಿ ದರದಲ್ಲಿ ವಿತರಣೆ ಹಾಗೂ ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಯಿತು.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya
error: Content is protected !!