35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪುದುವೆಟ್ಟು ಗುತ್ತಿಗಾರು ಧರ್ಮಗುರು ಫಾ. ಆದರ್ಶ್ ಜೋಸೆಫ್ ತಿಳಿಸಿದರು.

ಹತ್ತು ಹಲವಾರು ಸಮಸ್ಯೆಗಳಿಂದ ನಮ್ಮ ರೈತರು ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿ ಅವೈಜಾನಿಕ ಕಸ್ತೂರಿ ರಂಗನ್ ವರದಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಕೇಂದ್ರಗಳ ಗಡಿ ಗುರುತು ಆಗದೇ ಇರುವುದು, ಫ್ಲೋಟಿಂಗ್ ಸಮಸ್ಯೆ, ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಆಗದೇ ಇರುವುದು. ಈ ಎಲ್ಲಾ ಸಮಸ್ಯೆಗಳಿಂದ ರೈತರ ಬದುಕು ತ್ರಿಶಂಕು ಲೋಕದಲ್ಲಿ ಇದೆ. ಆದುದ್ದರಿಂದ ಎಲ್ಲಾ ರೈತರು, ಭಾಧಿತ ಗ್ರಾಮಸ್ಥರು, ಸಂಘ ಸಂಸ್ಥೆಗಳು ಪಕ್ಷತಿತಾವಾಗಿ, ಧರ್ಮತಿತವಾಗಿ ಈ ಹೋರಾಟಕ್ಕೆ ಬೆಂಬಲ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ. ರೈತರಿಗೆ ಮಾನಸಿಕ ಒತ್ತಡ ಕೊಡುವಂತ ಈ ಸಮಸ್ಯೆಗಳಿಗೆ ತಾರ್ಕಿಕವಾದ ಅಂತ್ಯ ಕಾಣುವ ತನಕ ಹೋರಾಟ ಮುಂದುವರಿಸಬೇಕಾಗಿದೆ. ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಕೊಡಬೇಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

,

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!