July 23, 2026
Uncategorized

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಜಿರೆಯ ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನವೀನಕುಮಾರ್ ಜೈನ್ ಹಾಗೂ ವಿದ್ಯಾರ್ಥಿಗಳಾದ ಖುಷಿ ಗೌಡ , ಸೋನಾಕ್ಷಿ , ಸೀಮಾ ಹಾಗೂ ಕಾವ್ಯಾ ಅವರಿಂದ ರಸಾಯನ ಶಾಸ್ತ್ರದಲ್ಲಿ ಇಂದ್ರಜಾಲ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.

ಅವಿನಾಶ್ ಕಾಜೂರು ಅವರು ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜಿಯಾ ಉಪಸ್ಥಿತರಿದ್ದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಧನುಶ್ರೀ ಸ್ವಾಗತಿಸಿ , ಪಲ್ಲವಿ ವಂದಿಸಿದರು. ಶ್ರೇಯಾ ನಿರೂಪಿಸಿದರು.

Related posts

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!