July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಪದ್ಮುಂಜ: ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಪದ್ಮುಂಜ, ಹಾಗೂ ಕಣಿಯೂರು ಗ್ರಾಮ ಪಂಚಾಯತ್ ಇದರ ಸಹಾಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ 07 ರಂದು ಪದ್ಮುಂಜ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ವಿಟ್ಲ ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳಾದ ಡಾ. ಭವಿಷ್ಯ ಮಾಹಿತಿ ನೀಡಿದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಕಾರ್ಯಕ್ರಮ ಉದ್ಘಾಟಿಸಿ ರೈತರು ಇಂತಹ ಯಾವುದೇ ಮಾಹಿತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಸಿ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಪಾಂಜಾಳ, ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಾನಕಿ, ಪದ್ಮುಂಜಾ ಸಿ ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಂಕಿತಾ ಬಿ, ತೋಟಗಾರಿಕೆ ಇಲಾಖೆಯ ಅಧಿಕಾರಿ ಚಂದ್ರಶೇಖರ್, ಮಲ್ಲಿನಾಥ್ ಉಪಸ್ಥಿತರಿದ್ದರು.

ಹೆಚ್ಚಿನ ರೈತರು ತರಬೇತಿ ಶಿಬಿರ ಮಾಹಿತಿ ಪಡೆದುಕೊಂಡರು.

Related posts

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya
error: Content is protected !!