23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಪದ್ಮುಂಜ: ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಪದ್ಮುಂಜ, ಹಾಗೂ ಕಣಿಯೂರು ಗ್ರಾಮ ಪಂಚಾಯತ್ ಇದರ ಸಹಾಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ 07 ರಂದು ಪದ್ಮುಂಜ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ವಿಟ್ಲ ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳಾದ ಡಾ. ಭವಿಷ್ಯ ಮಾಹಿತಿ ನೀಡಿದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಕಾರ್ಯಕ್ರಮ ಉದ್ಘಾಟಿಸಿ ರೈತರು ಇಂತಹ ಯಾವುದೇ ಮಾಹಿತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಸಿ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಪಾಂಜಾಳ, ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಾನಕಿ, ಪದ್ಮುಂಜಾ ಸಿ ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಂಕಿತಾ ಬಿ, ತೋಟಗಾರಿಕೆ ಇಲಾಖೆಯ ಅಧಿಕಾರಿ ಚಂದ್ರಶೇಖರ್, ಮಲ್ಲಿನಾಥ್ ಉಪಸ್ಥಿತರಿದ್ದರು.

ಹೆಚ್ಚಿನ ರೈತರು ತರಬೇತಿ ಶಿಬಿರ ಮಾಹಿತಿ ಪಡೆದುಕೊಂಡರು.

Related posts

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya
error: Content is protected !!