23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

ಬೆಳ್ತಂಗಡಿ:1994ರಲ್ಲಿ ಪ್ರಾರಂಭಗೊಂಡ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆಯು ಬೆಳ್ತಂಗಡಿಯ ಹನುಮಾನ್ ಕಾಂಪ್ಲೆಕ್ಸ್, ಬಾಳಿಗ ಕಟ್ಟಡದ ಒಂದನೇ ಮಹಡಿಯಲ್ಲಿ ನ.8 ರಂದು ಉದ್ಘಾಟನೆಗೊಂಡಿತು.

ಸಂಸ್ಥೆಯ ಉದ್ಘಾಟನೆಯನ್ನು ಶಾರದಾ ಟ್ರೇಡರ್ಸ್ ಮಾಲಿಕ ರಮೇಶ್ ಭಟ್ ನೇರವೇರಿಸಿ ಶುಭ ಕೋರಿದರು.

ಸಿಇಒ ಅಮೋಘ ಜೆ.ರೈ ದೀಪ ಬೆಳಗಿಸಿ ಮಾತನಾಡಿ ಪುತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸಂಸ್ಥೆಯು ಹಣಕಾಸು ಕ್ಷೇತ್ರದಲ್ಲಿ 30 ವರ್ಷಗಳ ಅನುಭವದೊಂದಿಗೆ ಕರ್ನಾಟಕ ರಾಜ್ಯದ 15 ಜಿಲ್ಲೆಗಳಲ್ಲಿ ಗ್ರಾಹಕರನ್ನು ಹೊಂದಿದೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಡಿಜಿಎಮ್ ಶ್ರೀವತ್ಸರಾಜ್, ರಿಜಿನಲ್ ಮ್ಯಾನೇಜರ್ ಉದಯ್ ಶ್ಯಾಮ್, ಬ್ರಾಂಚ್ ಮ್ಯಾನೇಜರ್ ಪ್ರದೀಪ್ ಬಂಗೇರ, ಚಾರ್ಟೆಡ್ ಅಕೌಂಟೆಂಟ್ ಹೇಮಂತ್ ಪೈ, ಬೆಳ್ತಂಗಡಿ ಹನುಮಾನ್ ಕಾಂಪ್ಲೆಕ್ಸ್ ಮಾಲಕ ಯಶವಂತ ಬಾಳಿಗ,
ತಾ.ಪಂ ಮಾಜಿ ಸದಸ್ಯರು ಶಶಿಧರ ಕಲ್ಮಂಜ,ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀ‌ನ್ ನೆರಿಯ,ವಕೀಲ ಪ್ರಶಾಂತ್, ಸ್ಪಂದನ ಲ್ಯಾಬೋರೇಟರಿ ಮುಖ್ಯಸ್ಥ ಮೆಲ್ಬಿ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಶಿವ ಕುಮಾರ್, ಸಂಜೀವ ಎ ಬೆಳ್ತಂಗಡಿ, ಭಾರತ್ ಆಟೋ ಕಾರ್ಸ್ ನ ಪ್ರವೀಣ್ ಕುಮಾರ್ ಹೆಚ್.ಎಸ್, ಶ್ರೀರಾಮ್ ಪೈನಾನ್ಸ್ ನ ಮ್ಯಾನೇಜರ್ ಸುಭಾಶ್ ಪುದ್ದರಬೈಲು, ಪ್ರಮೋದ್ ಬಂಗೇರ ನೆರಿಯ ಮೊದಲಾದವರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
error: Content is protected !!