September 6, 2026
ಗ್ರಾಮಾಂತರ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣಗೊಳಿಸಿದೆ.

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿಯ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರಗುವ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ನ.22. ರಂದು ತಾಲೂಕು ಅಧಿವೇಶನ ನರಸಿಂಹ ಘಡದ(ಗಡಾಯಿಕಲ್ಲು) ತಪ್ಪಲು ‘ಬಲಿಪ ರೆಸಾರ್ಟ್’ನಲ್ಲಿ ನಡೆಯಲಿದೆ.

ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಪ.ರಾಮಕೃಷ್ಣ ಶಾಸ್ತ್ರಿ ಅಧಿವೇಶನದ ತಯಾರಿಗಳ ಕುರಿತಾಗಿ ಹರ್ಷ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅ.ಭಾ.ಸಾ.ಪ ಬೆಳ್ತಂಗಡಿ ಸಮಿತಿ ಅಧ್ಯಕ್ಷರಾದ ಪ್ರೊ.ಗಣಪತಿ ಭಟ್ ಕುಳಮರ್ವ, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ, ಕೋಶಾಧಿಕಾರಿ ಶ್ರೀ ಕೇಶವಭಟ್ ಅತ್ತಾಜೆ, . ಸಹ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡ, ಉಪಾಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್, ವಿದ್ಯಾರ್ಥಿ ಪ್ರಕಾರ ಪ್ರಮುಖ್ ಶ್ರೀ ಮಹಾಬಲ ಗೌಡ.ವಿಭಾಗ ಸಂಯೋಜಕರಾದ ಶ್ರೀ ಸುಂದರ ಶೆಟ್ಟಿ ಇಳಂತಿಲ , ಶ್ರೀ ಶಿವಪ್ರಸಾದ್ ಸುರ್ಯ ಮೊದಲಾದವರು ಉಪಸ್ಥಿತರಿದ್ದರು

Related posts

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬಾರ್ಯ ಗ್ರಾ.ಪಂ ನಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya
error: Content is protected !!