24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ: ಆರೋಗ್ಯಯುತ ಜೀವನ ಪದ್ಧತಿ ಅಳವಡಿಸಿಕೊಂಡು ರೋಗ ಮುಕ್ತರಾಗಬೇಕಿದೆ. ಜನರಿಗೆ ಇತ್ತೀಚೆಗೆ ಸಿದ್ದ ಆಹಾರ ಹಾಗೂ ವಿದೇಶಿ ಆಹಾರದ ಬಗ್ಗೆ ಒಲವು ತೋರುತ್ತಿದ್ದಾರೆ. ಇದು ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಬೆಂಗಳೂರಿನ ವೈದ್ಯೆ ಡಾ. ಪೂರ್ಣಿಮಾ ಕೊಲ್ಲಿಪಾಲ್ ಹೇಳಿದರು.

ಇವರು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ನಡೆದ ಕಸದಿಂದ ರಸ ಎನ್ನುವ ಶೈಕ್ಷಣಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುಂದರ ಗೌಡ ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್ , ಉಜಿರೆ ಮಹಿಳಾ ಮಂಡಳಿ ಅಧ್ಯಕ್ಷೆ ಜಯಶ್ರೀ ಅಪ್ರಮೇಯ , ಸಂಪನ್ಮೂಲ ವ್ಯಕ್ತಿ ಚೇತನಾ ಅವರು ಕಸದಿಂದ ರಸ ವಿಷಯವಾಗಿ ಅನೇಕ ಗಿಡಗಳು ,ಹೂವುಗಳ ವಿವಿಧ ಕಲಾಕೃತಿ ರಚನೆಗಳ ಪ್ರಾತ್ಯಕ್ಷಿಕೆ ಮಾಡಿದರು.

ಕಿಲ್ಲೂರಿನ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಪೈಲಾರ್ ಅವರಿಗೆ ಶಾಲಾ ಆವರಣದಲ್ಲಿ ನೆಡಲು ವಿವಿಧ ಹಣ್ಣುಗಳ ಗಿಡಗಳನ್ನು ಹಾಗೂ ಅನೇಕ ತರಕಾರಿ ಬೀಜಗಳನ್ನು ಆನ್ಸ್ ಕ್ಲಬ್ ಹಾಗೂ ಉಜಿರೆ ಮಹಿಳಾ ಮಂಡಳಿ ವತಿಯಿಂದ ನೀಡಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಅಭಿಜಿತ್ ಸ್ವಾಗತಿಸಿ , ಸಿಂಚನಾ ವಂದಿಸಿದರು. ಸಂಜನಾ ಬಿ. ಜೆ. ನಿರೂಪಿಸಿದರು.

Related posts

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya
error: Content is protected !!