22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ: ಆರೋಗ್ಯಯುತ ಜೀವನ ಪದ್ಧತಿ ಅಳವಡಿಸಿಕೊಂಡು ರೋಗ ಮುಕ್ತರಾಗಬೇಕಿದೆ. ಜನರಿಗೆ ಇತ್ತೀಚೆಗೆ ಸಿದ್ದ ಆಹಾರ ಹಾಗೂ ವಿದೇಶಿ ಆಹಾರದ ಬಗ್ಗೆ ಒಲವು ತೋರುತ್ತಿದ್ದಾರೆ. ಇದು ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಬೆಂಗಳೂರಿನ ವೈದ್ಯೆ ಡಾ. ಪೂರ್ಣಿಮಾ ಕೊಲ್ಲಿಪಾಲ್ ಹೇಳಿದರು.

ಇವರು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ನಡೆದ ಕಸದಿಂದ ರಸ ಎನ್ನುವ ಶೈಕ್ಷಣಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುಂದರ ಗೌಡ ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್ , ಉಜಿರೆ ಮಹಿಳಾ ಮಂಡಳಿ ಅಧ್ಯಕ್ಷೆ ಜಯಶ್ರೀ ಅಪ್ರಮೇಯ , ಸಂಪನ್ಮೂಲ ವ್ಯಕ್ತಿ ಚೇತನಾ ಅವರು ಕಸದಿಂದ ರಸ ವಿಷಯವಾಗಿ ಅನೇಕ ಗಿಡಗಳು ,ಹೂವುಗಳ ವಿವಿಧ ಕಲಾಕೃತಿ ರಚನೆಗಳ ಪ್ರಾತ್ಯಕ್ಷಿಕೆ ಮಾಡಿದರು.

ಕಿಲ್ಲೂರಿನ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಪೈಲಾರ್ ಅವರಿಗೆ ಶಾಲಾ ಆವರಣದಲ್ಲಿ ನೆಡಲು ವಿವಿಧ ಹಣ್ಣುಗಳ ಗಿಡಗಳನ್ನು ಹಾಗೂ ಅನೇಕ ತರಕಾರಿ ಬೀಜಗಳನ್ನು ಆನ್ಸ್ ಕ್ಲಬ್ ಹಾಗೂ ಉಜಿರೆ ಮಹಿಳಾ ಮಂಡಳಿ ವತಿಯಿಂದ ನೀಡಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಅಭಿಜಿತ್ ಸ್ವಾಗತಿಸಿ , ಸಿಂಚನಾ ವಂದಿಸಿದರು. ಸಂಜನಾ ಬಿ. ಜೆ. ನಿರೂಪಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಪೂ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿ ಆಚರಣೆ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya
error: Content is protected !!