22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ: ಆರೋಗ್ಯಯುತ ಜೀವನ ಪದ್ಧತಿ ಅಳವಡಿಸಿಕೊಂಡು ರೋಗ ಮುಕ್ತರಾಗಬೇಕಿದೆ. ಜನರಿಗೆ ಇತ್ತೀಚೆಗೆ ಸಿದ್ದ ಆಹಾರ ಹಾಗೂ ವಿದೇಶಿ ಆಹಾರದ ಬಗ್ಗೆ ಒಲವು ತೋರುತ್ತಿದ್ದಾರೆ. ಇದು ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಬೆಂಗಳೂರಿನ ವೈದ್ಯೆ ಡಾ. ಪೂರ್ಣಿಮಾ ಕೊಲ್ಲಿಪಾಲ್ ಹೇಳಿದರು.

ಇವರು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ನಡೆದ ಕಸದಿಂದ ರಸ ಎನ್ನುವ ಶೈಕ್ಷಣಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುಂದರ ಗೌಡ ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್ , ಉಜಿರೆ ಮಹಿಳಾ ಮಂಡಳಿ ಅಧ್ಯಕ್ಷೆ ಜಯಶ್ರೀ ಅಪ್ರಮೇಯ , ಸಂಪನ್ಮೂಲ ವ್ಯಕ್ತಿ ಚೇತನಾ ಅವರು ಕಸದಿಂದ ರಸ ವಿಷಯವಾಗಿ ಅನೇಕ ಗಿಡಗಳು ,ಹೂವುಗಳ ವಿವಿಧ ಕಲಾಕೃತಿ ರಚನೆಗಳ ಪ್ರಾತ್ಯಕ್ಷಿಕೆ ಮಾಡಿದರು.

ಕಿಲ್ಲೂರಿನ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಪೈಲಾರ್ ಅವರಿಗೆ ಶಾಲಾ ಆವರಣದಲ್ಲಿ ನೆಡಲು ವಿವಿಧ ಹಣ್ಣುಗಳ ಗಿಡಗಳನ್ನು ಹಾಗೂ ಅನೇಕ ತರಕಾರಿ ಬೀಜಗಳನ್ನು ಆನ್ಸ್ ಕ್ಲಬ್ ಹಾಗೂ ಉಜಿರೆ ಮಹಿಳಾ ಮಂಡಳಿ ವತಿಯಿಂದ ನೀಡಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಅಭಿಜಿತ್ ಸ್ವಾಗತಿಸಿ , ಸಿಂಚನಾ ವಂದಿಸಿದರು. ಸಂಜನಾ ಬಿ. ಜೆ. ನಿರೂಪಿಸಿದರು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!