23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ: ಆರೋಗ್ಯಯುತ ಜೀವನ ಪದ್ಧತಿ ಅಳವಡಿಸಿಕೊಂಡು ರೋಗ ಮುಕ್ತರಾಗಬೇಕಿದೆ. ಜನರಿಗೆ ಇತ್ತೀಚೆಗೆ ಸಿದ್ದ ಆಹಾರ ಹಾಗೂ ವಿದೇಶಿ ಆಹಾರದ ಬಗ್ಗೆ ಒಲವು ತೋರುತ್ತಿದ್ದಾರೆ. ಇದು ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಬೆಂಗಳೂರಿನ ವೈದ್ಯೆ ಡಾ. ಪೂರ್ಣಿಮಾ ಕೊಲ್ಲಿಪಾಲ್ ಹೇಳಿದರು.

ಇವರು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ನಡೆದ ಕಸದಿಂದ ರಸ ಎನ್ನುವ ಶೈಕ್ಷಣಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುಂದರ ಗೌಡ ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್ , ಉಜಿರೆ ಮಹಿಳಾ ಮಂಡಳಿ ಅಧ್ಯಕ್ಷೆ ಜಯಶ್ರೀ ಅಪ್ರಮೇಯ , ಸಂಪನ್ಮೂಲ ವ್ಯಕ್ತಿ ಚೇತನಾ ಅವರು ಕಸದಿಂದ ರಸ ವಿಷಯವಾಗಿ ಅನೇಕ ಗಿಡಗಳು ,ಹೂವುಗಳ ವಿವಿಧ ಕಲಾಕೃತಿ ರಚನೆಗಳ ಪ್ರಾತ್ಯಕ್ಷಿಕೆ ಮಾಡಿದರು.

ಕಿಲ್ಲೂರಿನ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಪೈಲಾರ್ ಅವರಿಗೆ ಶಾಲಾ ಆವರಣದಲ್ಲಿ ನೆಡಲು ವಿವಿಧ ಹಣ್ಣುಗಳ ಗಿಡಗಳನ್ನು ಹಾಗೂ ಅನೇಕ ತರಕಾರಿ ಬೀಜಗಳನ್ನು ಆನ್ಸ್ ಕ್ಲಬ್ ಹಾಗೂ ಉಜಿರೆ ಮಹಿಳಾ ಮಂಡಳಿ ವತಿಯಿಂದ ನೀಡಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಅಭಿಜಿತ್ ಸ್ವಾಗತಿಸಿ , ಸಿಂಚನಾ ವಂದಿಸಿದರು. ಸಂಜನಾ ಬಿ. ಜೆ. ನಿರೂಪಿಸಿದರು.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya
error: Content is protected !!