September 6, 2026
Uncategorized

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ: ಆರೋಗ್ಯಯುತ ಜೀವನ ಪದ್ಧತಿ ಅಳವಡಿಸಿಕೊಂಡು ರೋಗ ಮುಕ್ತರಾಗಬೇಕಿದೆ. ಜನರಿಗೆ ಇತ್ತೀಚೆಗೆ ಸಿದ್ದ ಆಹಾರ ಹಾಗೂ ವಿದೇಶಿ ಆಹಾರದ ಬಗ್ಗೆ ಒಲವು ತೋರುತ್ತಿದ್ದಾರೆ. ಇದು ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಬೆಂಗಳೂರಿನ ವೈದ್ಯೆ ಡಾ. ಪೂರ್ಣಿಮಾ ಕೊಲ್ಲಿಪಾಲ್ ಹೇಳಿದರು.

ಇವರು ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ನಡೆದ ಕಸದಿಂದ ರಸ ಎನ್ನುವ ಶೈಕ್ಷಣಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುಂದರ ಗೌಡ ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿದರು. ಬೆಳ್ತಂಗಡಿ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್ , ಉಜಿರೆ ಮಹಿಳಾ ಮಂಡಳಿ ಅಧ್ಯಕ್ಷೆ ಜಯಶ್ರೀ ಅಪ್ರಮೇಯ , ಸಂಪನ್ಮೂಲ ವ್ಯಕ್ತಿ ಚೇತನಾ ಅವರು ಕಸದಿಂದ ರಸ ವಿಷಯವಾಗಿ ಅನೇಕ ಗಿಡಗಳು ,ಹೂವುಗಳ ವಿವಿಧ ಕಲಾಕೃತಿ ರಚನೆಗಳ ಪ್ರಾತ್ಯಕ್ಷಿಕೆ ಮಾಡಿದರು.

ಕಿಲ್ಲೂರಿನ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ಪೈಲಾರ್ ಅವರಿಗೆ ಶಾಲಾ ಆವರಣದಲ್ಲಿ ನೆಡಲು ವಿವಿಧ ಹಣ್ಣುಗಳ ಗಿಡಗಳನ್ನು ಹಾಗೂ ಅನೇಕ ತರಕಾರಿ ಬೀಜಗಳನ್ನು ಆನ್ಸ್ ಕ್ಲಬ್ ಹಾಗೂ ಉಜಿರೆ ಮಹಿಳಾ ಮಂಡಳಿ ವತಿಯಿಂದ ನೀಡಿದರು.

ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಅಭಿಜಿತ್ ಸ್ವಾಗತಿಸಿ , ಸಿಂಚನಾ ವಂದಿಸಿದರು. ಸಂಜನಾ ಬಿ. ಜೆ. ನಿರೂಪಿಸಿದರು.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya
error: Content is protected !!