26.7 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

ಬೆಳ್ತಂಗಡಿ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿ. 20ರಿಂದ ನಡೆಯಲಿದ್ದು, ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ನ.೮ರಂದು ಬೆಳ್ತಂಗಡಿ ತಾಲೂಕಿಗೆ ಆಗಮಿಸಿದಾಗ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು.

ಬೆಳ್ತಂಗಡಿ ಶ್ರೀ ಅಯ್ಯಪ್ಪ ಮಂದಿರದ ಬಳಿಯಿಂದ ಬಸ್‌ನಿಲ್ದಾಣದವರಗೆ ರಥವನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ವಾಣಿ ಕಾಲೇಜಿನ ಪ್ರಾಚಾರ್ಯ ಡಿ. ಯದುಪತಿ ಗೌಡ ಅವರ ನೇತೃತ್ವದಲ್ಲಿ ಘಟಕದ ಪದಾಧಿಕಾರಿಗಳು, ಕನ್ನಡ ಅಭಿಮಾನಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿ ಸಿಬಂದಿಗಳು ಮೆರವಣಿಗೆ ಮೂಲಕ ಬಸ್‌ನಿಲ್ದಾಣದವರೆಗೆ ಕರೆತರಲಾಯಿತು.

ಬಸ್‌ನಿಲ್ದಾಣದ ಬಳಿ ತೆಂಗಿನ ಕಾಯಿ ಒಡೆದು, ಕನ್ನಡ ಮಾತೆಗೆ ಹೂ ಹಾರವನ್ನು ಹಾಗೂ ಪುಷ್ಪಾರ್ಜನೆಯನ್ನು ತಾಲೂಕು ತಹಶೀಲ್ದಾರ್ ಪೃಥ್ವಿಸಾನಿಕಂ ನೆರವೇರಿಸಿದರು. ಜಿಲ್ಲಾ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಮಾತನಾಡಿ, ಕನ್ನಡ ರಥಯಾತ್ರೆಯ ಉದ್ದೇಶಗಳ ಬಗ್ಗೆ ತಿಳಿಸಿದರು. ನಿವೃತ್ತ ಪ್ರಾಂಶುಪಾಲ ಹಾಗೂ ಇತ್ತಿಚೇಗೆ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಎ. ಕೃಷ್ಣಪ್ಪ ಪೂಜಾರಿ ಅವರು ಕನ್ನಡ, ಭಾಷೆ, ನಾಡು ನುಡಿಯ ಸಂರಕ್ಷಣೆಗೆ ಮಾತನಾಡಿದರು.
ತಾಲೂಕು ಘಟಕದ ಅಧ್ಯಕ್ಷ ಡಿ.ಯದುಪತಿ ಗೌಡ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳ ತಾಲೂಕು ಘಟಕಾಧಿಕಾರಿ ಜಿಲ್ಲಾ ರಾಜೋತ್ಸವ ಪುರಸ್ಕೃತ ಜಯಾನಂದ ಲಾಯಿಲ, ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ.ಬಳಂಜ, ನ.ಪಂ ಮುಖ್ಯಾಧಿಕಾರಿ ರಾಜೇಶ್, ಕಂದಾಯ ನಿರೀಕ್ಷ ಪ್ರತೀಶ್, ಪಾವಡಪ್ಪ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಧನಂಜಯ, ನ.ಪಂ ಹಿರಿಯ ಸದಸ್ಯ ಜಗದೀಶ್ ಡಿ., ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಇಂದು ರಥ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ತಂಗಲಿದ್ದು, ನಾಳೆ ನ.9ರಂದು ಬೆಳಿಗ್ಗೆ 8.30 ಗಂಟೆಗೆ ಬೆಳ್ತಂಗಡಿ, ಬೆಳಿಗ್ಗೆ 9ಗಂಟೆಗೆ ಉಜಿರೆ, ಬೆಳಿಗ್ಗೆ 10 ಧರ್ಮಸ್ಥಳ ಮೂಲಕ ಕಡಬಕ್ಕೆ ತೆರಳಿದೆ.

Related posts

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya
error: Content is protected !!