25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ.

ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ ಮನೆಯ ಹತ್ತಿರ ಪ್ರತ್ಯೇಕ ಮನೆಯಲ್ಲಿ ವಾಸಮಾಡಿಕೊಂಡಿರುತ್ತಾರೆ. ಹರೀಶ್ ರ ತಮ್ಮನು ಸುಮಾರು ಎರಡು ವರ್ಷಗಳಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿದ್ದು ಇದಕ್ಕೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ.ಅಲ್ಲದೇ ಆತನು ಲಿವರ್ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಈ ಎಲ್ಲಾ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾದವನು 01 ತಿಂಗಳ ಹಿಂದೆ ಮಂಗಳೂರು ಪಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿರುತ್ತಾನೆ. ನ.07 ರಂದು ಬೆಳಿಗ್ಗೆ ಅವಧಿಯಲ್ಲಿ ಆತನಿಗಿದ್ದ ಮಾನಸಿಕ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜೀಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಯು ಡಿಆರ್ ನಂಬ್ರ: 24-2024 ಕಲಂ:194 BNSS ಪ್ರಕರಣ ದಾಖಲಾಗಿರುತ್ತದೆ.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಬೈಕ್ ಡಿಕ್ಕಿ: ಗಾಯಾಳು ಕಡಿರುದ್ಯಾವರ ಅಂತರ ಲೋಕಯ್ಯ ಗೌಡ ಮೃತ್ಯು

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya
error: Content is protected !!