July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ.

ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ ಮನೆಯ ಹತ್ತಿರ ಪ್ರತ್ಯೇಕ ಮನೆಯಲ್ಲಿ ವಾಸಮಾಡಿಕೊಂಡಿರುತ್ತಾರೆ. ಹರೀಶ್ ರ ತಮ್ಮನು ಸುಮಾರು ಎರಡು ವರ್ಷಗಳಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿದ್ದು ಇದಕ್ಕೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ.ಅಲ್ಲದೇ ಆತನು ಲಿವರ್ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಈ ಎಲ್ಲಾ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾದವನು 01 ತಿಂಗಳ ಹಿಂದೆ ಮಂಗಳೂರು ಪಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿರುತ್ತಾನೆ. ನ.07 ರಂದು ಬೆಳಿಗ್ಗೆ ಅವಧಿಯಲ್ಲಿ ಆತನಿಗಿದ್ದ ಮಾನಸಿಕ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜೀಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಯು ಡಿಆರ್ ನಂಬ್ರ: 24-2024 ಕಲಂ:194 BNSS ಪ್ರಕರಣ ದಾಖಲಾಗಿರುತ್ತದೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya
error: Content is protected !!