23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.8 ರಂದು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಶಿಬಿರವನ್ನು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ಹರೀಶ್ ಕೆ.ಬಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರು, ಎಸ್.ಡಿ.ಎಮ್.ಸಿ ಸದಸ್ಯರು, ಶಾಲಾ ಶಿಕ್ಷಕರು, ಊರಿನ ನಾಗರಿಕರು, ಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

ಶಿಬಿರದಲ್ಲಿ ಕಂಪ್ಯೂಟರೀಕೃತ ಕಣ್ಣಿನ ಉಚಿತ ತಪಾಸಣೆ, 5ರಿಂದ 15 ವಯಸ್ಸಿನವರೆಗೆ ಕಣ್ಣಿನ ತೊಂದರೆ ಇರುವ ಮಕ್ಕಳಿಗೆ ಶಿಬಿರದ ಪ್ರಯುಕ್ತ ಉಚಿತವಾಗಿ ಕನ್ನಡಕ ವಿತರಣೆ, ಶಿಬಿರದಲ್ಲಿ ಸಮೀಪ ದೃಷ್ಟಿ (Near Vision) ತೊಂದರೆಯವರಿಗೆ ಉಚಿತ ಕನ್ನಡಕ ವಿತರಣೆ, 15 ವಯಸ್ಸಿಗಿಂತ ಮೇಲ್ಪಟ್ಟು ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ಅಗತ್ಯವುಳ್ಳವರಿಗೆ ಕನ್ನಡಕ ರಿಯಾಯಿತಿ ದರದಲ್ಲಿ ವಿತರಣೆ ಹಾಗೂ ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಯಿತು.

Related posts

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya
error: Content is protected !!